ಬೆಂಗಳೂರು,ಆ.22- ಮಹೇಶ್ಶೆಟ್ಟಿ ತಿಮರೋಡಿಯವರನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು.
ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಪ್ರಕರಣದಲ್ಲಿ ಮಹೇಶ್ಶೆಟ್ಟಿಯವರನ್ನು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಅವರ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಹೋದಾಗ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ 25 ಕ್ಕೂ ಹೆಚ್ಚು ಮಂದಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.
ಹಾಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಸೇರಿದಂತೆ 30 ಮಂದಿ ವಿರುದ್ಧ ಬ್ರಹ್ಮಾವರ ಠಾಣೆ ಸಬ್ ಇನ್್ಸಪೆಕ್ಟರ್ ಅಶೋಕ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಎ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟಣ್ಣನವರ್ಗೆ ಸೂಚಿಸಿದ್ದರ ಹಿನ್ನೆಲೆಯಲ್ಲಿ ಇಂದು ಅವರು ವಿಚಾರಣೆಗೆ ಹಾಜರಾದರು.
- ಅ.10 ರಿಂದ ಜಿಯೋಹಾಟ್ಸ್ಟಾರ್ನಲ್ಲಿ ಪ್ರತ್ಯೇಕವಾಗಿ ಸ್ಟ್ರೀಮ್ ಆಗಲಿದೆ ಮಿರಾಯ್
- ಬೆಂಗಳೂರು : ಬಾರ್ ವಾಶ್ರೂಂನಲ್ಲಿ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದವಾಗಿ ಸಾವು
- ಕಸ ಎಸೆಯದಂತೆ ಬುದ್ಧಿ ಹೇಳಿದ ಪೌರಕಾರ್ಮಿಕನಿಗೆ ಥಳಿಸಿ ಪರಾರಿಯಾದ ತಂದೆ-ಮಗಳು
- ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಕೊಂದ ಕಾಮುಕನಿಗೆ ಗುಂಡೇಟು
- ಶಾಸಕ ವೀರೇಂದ್ರ ಪಪ್ಪಿಯನ್ನು ಸೆಳೆಯಲು ಬಿಜೆಪಿ ಯತ್ನಸಿದೆ : ಸಂತೋಷ್ ಲಾಡ್