ನಿಂತಿದ್ದ ಲಾರಿಗೆ ಬೆಂಕಿ ; ತಪ್ಪಿದ ಅನಾಹುತ

ದೊಡ್ಡಬಳ್ಳಾಪುರ,ಅ.26- ನಿಂತಿದ್ದ ಲಾರಿಗೆ ಬೆಂಕಿ ತಗುಲಿ, ಲಾರಿ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.ಟ್ರ್ಯಾಕ್ಟರ್ ಇಂಜಿನ್ ಸಾಗಿಸಿ ಮರಳಿ ದಾಬಸ್‌ಪೇಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.