Tuesday, July 1, 2025
Homeರಾಷ್ಟ್ರೀಯ | Nationalತಮಿಳುನಾಡಿನಲ್ಲಿ ಲಾಕಪ್ ಡೆತ್, ಐವರು ಪೊಲೀಸರ ಬಂಧನ

ತಮಿಳುನಾಡಿನಲ್ಲಿ ಲಾಕಪ್ ಡೆತ್, ಐವರು ಪೊಲೀಸರ ಬಂಧನ

Five policemen held for custodial death in TN; Stalin reaffirms 'Dravidian Model' justice

ಚೆನ್ನೈ,ಜುಲೈ.1- ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದ್ದ ಸೆಕ್ಯೂರಿಟಿಗಾರ್ಡ್ ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಬಂಧಿಸಲಾಗಿದೆ.ಜೂನ್ 28 ರಂದು ಈ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಡರಾತ್ರಿ ಅಧಿಕೃತ ಮಾಹಿತಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಆರಂಭಿಸಲಾಗಿದ್ದು ಮತ್ತು ನಿನ್ನೆ ರಾತ್ರಿ ಬಂದ ಮರಣೋತ್ತರ ಪರೀಕ್ಷೆಯ ವರದಿಯ ನಂತರ, ಯಾವುದೇ ವಿಳಂಬವಿಲ್ಲದೆ ಮುಂದಿನ ಕ್ರಮ ಕೈಗೊಳ್ಳಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೊಲೆ ಆರೋಪಗಳನ್ನು ಹೊರಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಪೊಲೀಸರನ್ನು ಬಂಧಿಸಲಾಗಿದೆ. ಮತ್ತು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.ಈ ದುರದೃಷ್ಟಕರ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ನ್ಯಾಯಯುತ, ಪಾರದರ್ಶಕ ಮತ್ತು ಪಕ್ಷಪಾತವಿಲ್ಲದ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗಾದ ತಿರುಪ್ಪುವನಂನ ನಿವಾಸಿ ಸೆಕ್ಯೂರಿಟಿಗಾರ್ಡ್ ಅಜಿತ್‌ಕುಮಾರ್ ಎಂಬುವವರನ್ನು ಸ್ಥಳೀಯ ಪೊಲೀಸರು ಬಂಧಿಸಿ ಹೊಡೆದಿದ್ದರೆ ಈ ವೇಳೆ ಆತ ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿದ್ದು ಇದು ರಾಜ್ಯಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು. ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು.

RELATED ARTICLES

Latest News