Monday, May 20, 2024
Homeರಾಜ್ಯಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ನಿಧನ

ಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ನಿಧನ

ಬೆಂಗಳೂರು- ವಿಜ್ಞಾನ ಲೋಕ, ರಘು ಬುಕ್ಸ್ , ಜ್ಞಾನ, ತತ್ವಶಾಸ್ತ್ರ ಮತ್ತು ಧರ್ಮ ಎಂಬ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದ್ದ ನಾಡಿನ ಹೆಸರಾಂತ ಆಹಾರ ತಜ್ಞ, ಅಂಕಣಕಾರ ಕೆ.ಸಿ. ರಘು ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಕೆ.ಸಿ. ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವಲ್ರ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆಗ್ರ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು.

ಶಾಹೀನ್ ಶಾ ಆಫ್ರಿದಿಗೆ ರವಿಶಾಸ್ತ್ರಿ ಹಿಗ್ಗಾಮುಗ್ಗಾ ಕ್ಲಾಸ್

ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಇದಾಗಿತ್ತು. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿರುತ್ತಾರೆ. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ಆಹಾರ ರಾಜಕೀಯ ಮತ್ತು ತುತ್ತು ತತ್ವ ಪುಸ್ತಕಗಳನ್ನು ಪ್ರಕಟಿಸಿದ್ದರು.

RELATED ARTICLES

Latest News