Monday, May 6, 2024
Homeರಾಜ್ಯಅರಣ್ಯ ಅಕ್ರಮ ಒತ್ತುವರಿ ತೆರವು ಅನಿವಾರ್ಯ : ಈಶ್ವರ್ ಖಂಡ್ರೆ

ಅರಣ್ಯ ಅಕ್ರಮ ಒತ್ತುವರಿ ತೆರವು ಅನಿವಾರ್ಯ : ಈಶ್ವರ್ ಖಂಡ್ರೆ

ಬೆಂಗಳೂರು,ಅ.10- ಅರಣ್ಯ ಇಲಾಖೆಯಿಂದ ಸಕ್ರಮ ವಾಗಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ, ಅಕ್ರಮ ಒತ್ತುವರಿಗಳನ್ನು ತೆರವು ಮಾಡುವುದು ಅನಿವಾರ್ಯ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಅಲ್ಲಿಯೇ ನೆಲೆಸಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರಮಬದ್ಧವಾಗಿ, ನಿಯಮಬದ್ಧವಾಗಿ, ಕಾನೂನಾತ್ಮಕವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶಾಸಕರು ಮತ್ತು ಸಾರ್ವಜನಿಕರು ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

1978 ರ ಪೂರ್ವದಲ್ಲಿ ವಾಸಿಸುತ್ತಿರುವವರು ಮತ್ತು ಅರಣ್ಯದಂಚಿನಲ್ಲಿ ವಾಸ ಮಾಡುತ್ತಿರುವವರನ್ನು ಗುರುತಿಸಿ ಪಟ್ಟಿ ಮಾಡಲು ಸೂಚಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಪ್ರಕರಣವನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಪಡಿಸಲು ನಿರ್ಧರಿಸಿದ್ದೇವೆ. ಸಾವಿರಾರು ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಇದರಿಂದ ಬಡವರಿಗೆ, ರೈತರಿಗೆ, ಬುಡಕಟ್ಟು ಸಮುದಾಯದವರಿಗೆ ಅನುಕೂಲವಾಗಲಿದೆ ಎಂದರು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ತೆರವು ಮಾಡಲಾಗುವುದು. ನಮ್ಮ ಸರ್ಕಾರ ಮೊದಲಿನಿಂದಲೂ ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಕ್ಕುಗಳ ವಿಷಯದಲ್ಲಿ ಸಕಾರಾತ್ಮಕವಾಗಿದೆ. ಸಣ್ಣ ಪ್ರಮಾಣದ ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಮತ್ತು ನಿವಾಸಿಗಳಿಗೆ ತೊಂದರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಸೇರಿ ಶ್ರೀಶೈಲ ಜಗದ್ಗುರುಗಳನ್ನು ನಿನ್ನೆ ಭೇಟಿ ಮಾಡಿದ್ದೇವೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ನಾಯಕರು ಇದ್ದರು. ಶ್ರೀಗಳ ಜೊತೆ ರಾಜಕೀಯ ಹೊರತಾಗಿ ಹಲವಾರು ವಿಚಾರಗಳನ್ನು ಚರ್ಚಿಸಿದ್ದೇವೆ ಎಂದರು.

RELATED ARTICLES

Latest News