ಮೆಂಧರ್, ಮೇ 23 (ಪಿಟಿಐ)- ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸಂಭವಿಸಿದ ಕಾಡಿನ ಬೆಂಕಿಯಿಂದಾಗಿ ಹಲವಾರು ನೆಲಬಾಂಬ್ಗಳು ಸ್ಫೋಟಗೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆದರೆ, ಈ ಅವಘಡದಲ್ಲಿ ಯಾವುದೇ ಜೀವಹಾನಿ ವರದಿಯಾಗಿಲ್ಲ. ಎಲ್ಒಸಿ ಬಳಿ ಕಾಡಿನ ಬೆಂಕಿ ಕಾಣಿಸಿಕೊಂಡು ಕೃಷ್ಣ ಘಾಟಿ ವಲಯದ ಪರ್ವತ ಪ್ರದೇಶದ ದೊಡ್ಡ ಭಾಗಕ್ಕೆ ಹರಡಿತು ಎಂದು ತಿಳಿದುಬಂದಿದೆ.
ಕಾಡಿನ ಬೆಂಕಿಯಿಂದಾಗಿ, ಆ ಪ್ರದೇಶದಲ್ಲಿ ಹಲವಾರು ನೆಲಬಾಂಬ್ಗಳು ಸ್ಫೋಟಗೊಂಡಿವೆ, ಆದರೆ ಯಾರಿಗೂ ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅವರು ಹೇಳಿದರು. ಸೇನೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.