ಬೆಂಗಳೂರು,ಜು.29- ಸ್ನೇಹಿತನೊಂದಿಗೆ ಸೇರಿಕೊಂಡು ಚಿಕ್ಕಪ್ಪನ ಮನೆಯಲ್ಲೇ ಹಣ,ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಪ್ರಮುಖ ಆರೋಪಿತೆ ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ನಗದು ಸೇರಿದಂತೆ 65 ಲಕ್ಷ ರೂ. ಬೆಲೆ ಬಾಳುವ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ವಶಪಡಿಸಿಕೊಂಡಿದ್ದಾರೆ.
ಭೈರತಿ ಗ್ರಾಮದ ರಿಯಲ್ಎಸ್ಟೇಟ್ ಉದ್ಯಮಿ ಶ್ರೀನಿವಾಸ ರೆಡ್ಡಿ ಮನೆಯ ಕೊಠಡಿಯ ಲಾಕರ್ನಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆಗಿರುವ ಬಗ್ಗೆ ಮನೆಯ ಇಬ್ಬರು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಿ, ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ ಪೊಲೀಸರು, ದೂರುದಾರರ ಅಣ್ಣನ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದಾಗ ಸ್ನೇಹಿತನೊಂದಿಗೆ ಸೇರಿ ಕಳ್ಳತನ ಮಾಡಿರುವುದಾಗಿ ಹೇಳಿದ್ದಾಳೆ.ಕಳವು ಮಾಡಿದ ಕೆಲವು ಚಿನ್ನಾಭರಣಗಳನ್ನು ಮತ್ತಿಬ್ಬರು ಸ್ನೇಹಿತರಿಗೆ ನೀಡಿದ್ದು, ಅವುಗಳನ್ನ ಕರಗಿಸಿ ಚಿನ್ನದ ಗಟ್ಟಿಯನ್ನಾಗಿ ಮಾರ್ಪಡಿಸಿ ಮಾರಾಟ ಮಾಡಿ ಹಣ ಪಡೆಯುತ್ತಿದ್ದುದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ.
ಚಿನ್ನಾಭರಣಗಳನ್ನು ಸ್ವೀಕರಿಸಿದ್ದ ಮತ್ತಿಬ್ಬರು ಸ್ನೇಹಿತರ ಬಗ್ಗೆಯೂ ಸಹ ಮಾಹಿತಿ ನೀಡಿದ್ದು, ಆತನನ್ನೂ ಕೊತ್ತನೂರಿನ ಮನೆಯಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿನ್ನಾಭರಣಗಳನ್ನು ಸ್ವೀಕರಿಸಿದ್ದ ಮತ್ತಿಬ್ಬರು ಸ್ನೇಹಿತರನ್ನು ಗುಬ್ಬಿ ಸರ್ಕಲ್ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹೇಳಿದ್ದಾರೆ.
ನಾಲ್ವರು ಆರೋಪಿಗಳನ್ನು ವಿಚಾರಣೆ ನಡೆಸಿ ಚಿಕ್ಕಪೇಟೆಯ ಎರಡು ಜ್ಯುವೆಲರಿ ಅಂಗಡಿಗಳಿಂದ ಮತ್ತು ಕೊತ್ತನೂರಿನಲ್ಲಿ ವಾಸವಿರುವ ಆರೋಪಿಗಳಿಬ್ಬರ ಮನೆಯಿಂದ ಒಟ್ಟು 548 ಗ್ರಾಂ ಚಿನ್ನಾಭರಣ, ಚಿನ್ನದ ಗಟ್ಟಿ ಮತ್ತು 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 65 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.ಉಳಿದ ಚಿನ್ನಾಭರಣಗಳ ಪತ್ತೆಕಾರ್ಯ ಮುಂದುವರೆದಿದ್ದು ತನಿಖೆ ಪ್ರಗತಿಯಲ್ಲಿದೆ. ಈ ಪ್ರಕರಣವನ್ನು ಇನ್್ಸಪೆಕ್ಟರ್ ಚೇತನ್ಕುಮಾರ್ ಹಾಗೂ ಸಿಬ್ಬಂದಿ ತಂಡ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.
- ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಿ : ಸರ್ಕಾರಕ್ಕೆ ಆರ್.ಆಶೋಕ್ ಓಪನ್ ಚಾಲೆಂಜ್
- ಅಪ್ಪು ನಮ್ಮನ್ನಗಲಿ ಇಂದಿಗೆ 4 ವರ್ಷ..!
- ಇಂಡಿಯನ್ ಪಂಚಾಂಗ ಮತ್ತು ರಾಶಿಭವಿಷ್ಯ (29-10-2025)
- ಪ್ರತಿಭಾನ್ವಿತ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ
- ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್ಆರ್ಆರ್
