ಭೀಕರ ಅಪಘಾತದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

Social Share

ಬೆಂಗಳೂರು.ಫೆ.16-ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ವೈಷ್ಣವಿ, ಭರತï, ಸಿರಿಲï, ಮತ್ತು ವೆಂಕಟ್ ಎಂದು ತಿಳಿದುಬಂದಿದೆ.. ಶೀಕೃಷ್ಣ, ಅಂಕಿತಾ ರೆಡ್ಡಿ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದು ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ,ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎನ್ನಲಾಗಿದೆ.
ತಮಿಳುನಾಡು ಮೂಲದ ಟಿ.ಎನ್ 77, ಕೆ 4512 ಸಂಖ್ಯೆಯ ಕಾರಿನಲ್ಲಿ ಇವರೆಲ್ಲರು ಕೋಲಾರದ ನರಸಾಪುರ ಬಳಿಯಿರೂ ಕೆಫೆ ಕಾಫಿ ಡೇ ಗೆ ಲಾಂಗ್ ಡ್ರೈವ್ ಹೋಗಿದ್ದರು . ನಂತರ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‍ಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಹಾರಿ ಎದುರಿನಿಂದ ಬರುತ್ತದ್ದ ಲಾರಿಗೆ ಡಿಕ್ಕಿ ಹೊಡೆದಿದೆನ್ನಲಾಗಿದೆ.
ಕಾರು ನುಜ್ಜುಗುಜ್ಜಾಗಿದೆ,ಸ್ಥಳಕ್ಕೆ ಹೊಸಕೋಟೆ ಸಿಪಿಐ ಮಂಜುನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅತಿವೇಗ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

Articles You Might Like

Share This Article