ವಾರಾಣಾಸಿ, ಮಾ. 30- ವಿಮಾನ ಪ್ರಯಾಣದ ವೇಳೆ ಎರಡು ಬಾರಿ ತುರ್ತು ದ್ವಾರ ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿ ಪೊಲೀಸರ ವಶಕ್ಕೆ ನೀಡಲಾಗಿದೆ. ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಎರಡು ಬಾರಿ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆರೆಯಲು ಯತ್ನಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೊದಲು ನನಗೆ ತಿಳಿಯದೇ ತುರ್ತು ದ್ವಾರ ತೆರೆಯಲು ಯತ್ನಿಸಿದೆ ಎಂದು ಹೇಳಿ ಮತೊಮ್ಮೆ ಅದೇ ಕೆಲಸಕ್ಕೆ ಮುಂದಾಗಿದ್ದ ವ್ಯಕ್ತಿಯನ್ನು ತಡೆದಾಗ ನನ್ನ ಮೈಮೇಲೆ ದೆವ್ವ ಬಂದಿದೆ ಎಂದು ಹೇಳಿದ ವ್ಯಕ್ತಿಯನ್ನು ವಿಮಾನ ಲ್ಯಾಂಡ್ ಆದ ನಂತರ ಭದ್ರತಾ ಸಿಬ್ಬಂದಿಗಳಿಗೆ ಹಸ್ತಾಂತರಿಸಲಾಗಿದೆ. ವಿಮಾನ ಟೇಕ್ ಆಫ್ ಆದ ಸುಮಾರು 15 ನಿಮಿಷಗಳ ನಂತರ ಅದ್ನಾನ್ ಎಂಬ ವ್ಯಕ್ತಿ ಮೊದಲು ತುರ್ತು ಬಾಗಿಲನ್ನು ತಿದ್ದಲು ಪ್ರಯತ್ನಿಸಿದ್ದ. ಕ್ಯಾಬಿನ್ ಸಿಬ್ಬಂದಿ ತಕ್ಷಣ ಅವನನ್ನು ತಡೆದು ಎಚ್ಚರಿಸಿದ್ದರು, ನಂತರ ಅವನು ಸ್ವಲ್ಪ ಸಮಯದವರೆಗೆ ಶಾಂತನಾಗಿದ್ದ. ಆದರೆ ರಾತ್ರಿ 10.20 ರ ಸುಮಾರಿಗೆ, ವಿಮಾನವು ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಅರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಸುಮಾರು 500 ಅಡಿ ಎತ್ತರದಲ್ಲಿ ಇಳಿಯುವ ಹಂತದಲ್ಲಿದ್ದಾಗ ಅದ್ನಾನ್ ಮತ್ತೆ ಎಕ್ಸಿಟ್ ಡೋರ್ ತೆರೆಯಲು ಪ್ರಯತ್ನಿಸಿದ್ದಾನೆ.
ಸಿಬ್ಬಂದಿಯಿಂದ ಮಾಹಿತಿ ಪಡೆದ ನಂತರ, ಪೈಲಟ್ ಲ್ಯಾಂಡಿಂಗ್ ಅನ್ನು ಸ್ಥಗಿತಗೊಳಿಸಿದರು, ಸುತ್ತಾಟ ನಡೆಸಿದರು ಮತ್ತು ಬೆಳಗ್ಗೆ 10. 35 ಕ್ಕೆ ವಿಮಾನವನ್ನು ಮತ್ತೆ ಸುರಕ್ಷಿತವಾಗಿ ಇಳಿಸಿದ್ದಾರೆ. ಈ ಘಟನೆಯು ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಭಯವನ್ನುಂಟು ಮಾಡಿತ್ತು. ಆದರೆ ಎಲ್ಲರೂ ಸುರಕ್ಷಿತವಾಗಿ ಇಳಿಸಿದ್ದಕ್ಕಾಗಿ ಸಿಬ್ಬಂದಿಯನ್ನು ಶ್ಲಾಘಿಸಿದರು.ನಿಯಮಗಳ ಪ್ರಕಾರ, ಆರೋಪಿ ಪ್ರಯಾಣಿಕನನ್ನು ತಕ್ಷಣವೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ಭದ್ರತಾ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳು ನಡೆಸಿದ ವಿಚಾರಣೆಯ ಸಮಯದಲ್ಲಿ, ಅದ್ನಾನ್ ಆರಂಭದಲ್ಲಿ ತಾನು ಏಕೆ ಹಾಗೆ ವರ್ತಿಸಿದೆ ಎಂದು ತಿಳಿದಿಲ್ಲ ಎಂದು ಹೇಳಿದ್ದಾನೆ, ಬಳಿಕ ನಗೆ ದೆವ್ವ ಹಿಡಿದಿದೆ ಎಂದಿದ್ದಾನೆ.
ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದಾಗ, ತಾನು ಗೋವಾದಲ್ಲಿ ರಜೆ ಮುಗಿಸಿ ಹಿಂತಿರುಗುತ್ತಿದ್ದೇನೆ.ತಾನು ಎಳೆದ ಹ್ಯಾಂಡಲ್ ತುರ್ತು ನಿರ್ಗಮನ ಬಾಗಿಲಿನದ್ದು ಎಂದು ತಿಳಿದಿರಲಿಲ್ಲ ಎಂದಿದ್ದಾರೆ. ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಇನ್ನೂ ಪ್ರಶ್ನಿಸಲಾಗುತ್ತಿದೆ.
