ಅಹಮದಾಬಾದ್, ಮಾ. 30: ಗುಜರಾತ್ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿ ಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದ ಅವರು, ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.
ಇಂದಿಗೂ ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಬೇಕು, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು ಮತ್ತು ಸಿಇಒ ಆಗಬೇಕು ಎಂದು ನಾವು ಬಯಸುತ್ತೇವೆ. ಇದು ನಮ್ಮ ಹೋರಾಟ ಎಂದರು.
ಒಬ್ಬ ವ್ಯಕ್ತಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಅವರ ದೇಹದಾದ್ಯಂತ 19 ಮುರಿತಗಳು ಸಂಭವಿಸಿವೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಎತ್ತುವವರು ಹೆಚ್ಚಾಗಿ ಭಾರೀ ಬೆಲೆ ತೆರಬೇಕಾಗುತ್ತಿದೆ ಎಂದು ದೂರಿದರು.
