Thursday, June 12, 2025
Homeರಾಷ್ಟ್ರೀಯ | NationalBREAKING NEWS: ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

BREAKING NEWS: ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಹೈದರಾಬಾದ್‌,ಜೂ.11-ಅಕ್ರಮ ಗಣಿಗಾರಿಕೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಸಿಬಿಐ ನ್ಯಾಯಾಲಯ ವಿಧಿಸಿದ್ದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಜನಾರ್ಧನ ರೆಡ್ಡಿ ಅವರು ಸಿಬಿಐ ನ್ಯಾಯಾಲಯದ ಆದೇಶ ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳು ಶಿಕ್ಷೆಗೆ ತಡೆಯಾಜ್ಞೆ ನೀಡಿ ಹತ್ತು ಲಕ್ಷ ರೂ. 2 ಶೂರಿಟಿ ಹಾಗೂ ಪಾಸ್‌‍ಪೋರ್ಟ್‌ಗಳನ್ನು ನೀಡುವುದೂ ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಜನಾರ್ಧನ ರೆಡ್ಡಿಯವರು ದೇಶ ಬಿಟ್ಟು ಹೋಗದಂತೆ ತೆಲಂಗಾಣ ಹೈಕೋರ್ಟ್‌ ಆದೇಶ ನೀಡಲಾಗಿದೆ. ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದ ಜನಾರ್ಧನ ರೆಡ್ಡಿಯವರಿಗೆ ಈ ಆದೇಶದಿಂದ ನಿರಾಳರಾಗಿದ್ದು, ಸಧ್ಯದಲ್ಲೇ ಜೈಲಿನಿಂದ ಹೊರ ಬರಲಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಶಿಕ್ಷೆಗೆ ಗುರಿಯಾಗಿದ್ದು ಅವರ ಅರ್ಜಿಯ ವಿಚಾರಣೆ ಸದ್ಯದಲ್ಲೇ ನಡೆಯಲಿದೆ.

RELATED ARTICLES

Latest News