ಮಂಡ್ಯ,ಜೂನ್.1- ಪಾದದ ಮೂಳೆ ಮುರಿತ ಚಿಕಿತ್ಸೆಗೆ ಬಂದ 7 ವರ್ಷದ ಬಾಲಕಿ ನಗರ ಮಿಮ್ಸೌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಮಳವಳ್ಳಿಯ ನೆಲ್ಲೂರು ಗ್ರಾಮದ ಸಾನ್ವಿ (7) ಮೃತ ಬಾಲಕಿ. ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ಮಿಮ್ಸೌಆಸ್ಪತ್ರೆಯ ವೈದ್ಯರ ವಿರುದ್ಧ ಬಾಲಕಿ ಕುಟುಂಬಸ್ಥರು ಸಾಲು ಸಾಲು ಗಂಭೀರ ಆರೋಪ ಮಾಡಿದ್ದಾರೆ.
ಟೈಲ್್ಸ ಬಿದ್ದು ಬಾಲಕಿ ಸಾನ್ವಿಯ ಪಾದದ ಮೂಳೆ ಮುರಿದಿತ್ತು. ಇದರಿಂದ ತಂದೆ ನಿಂಗರಾಜು ಕಳೆದ ಮೇ 29ರಂದು ಮಿಮ್ಸೌಆಸ್ಪತ್ರೆಗೆ ಕರೆತಂದು ಚಿಕಿತ್ಸೆಗಾಗಿ ದಾಖಲಿಸಿದ್ದರು.
ಎಲ್ಲಾ ಪರೀಕ್ಷೆಗಳ ನಂತರ ಅಂದು ರಾತ್ರಿಯೇ ಸಾನ್ವಿಗೆ ಶಸ್ತ್ರಚಿಕಿತ್ಸೆನಡೆಸಲಾಗಿತ್ತು.ಬಳಿಕ ರಾತ್ರಿಯೇ ಸಾನ್ವಿಯನ್ನ ವಾರ್ಡ್ಗೆ ಶಿಫ್್ಟ ಮಾಡಲಾಗಿತ್ತು.
ಆದ್ರೆ ಶುಕ್ರವಾರ ಬೆಳಗ್ಗೆಯೇ ಬಾಲಕಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮತ್ತೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲಿಸಲಾಗಿತ್ತು.ಡ್ರಿಪ್ಸ್ ಮೂಲಕ ಔಷಧಿ ನೀಡಲಾಗಿತ್ತು. ಔಷಧಿ ನೀಡ್ತಿದ್ದಂತೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಬಾಲಕಿ ಸಾನ್ವಿ ಕಳೆದ ರಾತ್ರಿ 10:30ರಲ್ಲಿ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಿದ್ದರಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಆದ್ರೆ ಇದಕ್ಕೆ ಪ್ರತಿಕ್ರಿಯಿಸಿರುವ ಮಿಮ್ಸೌನ ಆರ್ಎಂಒ ಡಾ. ದರ್ಶನ್, ಅಂಗಾಂಗ ವೈಫಲ್ಯದಿಂದ ಬಾಲಕಿ ಸಾವಾಗಿದೆ.ಅದು ಹೇಗೆ ಅಂಗಾಂಗ ವೈಫಲ್ಯ ಆಗುತ್ತೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.ಸಾರ್ವಜನಿಕರು ಕೂಡ ಆಕ್ರೋಶ ಹೊರಹಾಕಿದ್ದಾರೆ.