Saturday, July 27, 2024
Homeರಾಜ್ಯಸಚಿವ ನಾಗೇಂದ್ರ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ : ಬಿಜೆಪಿ ಆರೋಪ

ಸಚಿವ ನಾಗೇಂದ್ರ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ : ಬಿಜೆಪಿ ಆರೋಪ

ಬೆಂಗಳೂರು,ಜೂ.1- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರಕಾರ ಬಹುಕೋಟಿ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ಅವರನ್ನು ರಕ್ಷಿಸುವ ಸಲುವಾಗಿ ಅಕ್ರಮ ಹಣ ವರ್ಗಾವಣೆಯ ಆರೋಪವನ್ನು ಯೂನಿಯನ್‌ ಬ್ಯಾಂಕ್‌ ಆ್‌‍ ಇಂಡಿಯಾದ ಮೇಲೆ ಹೊರಿಸುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

ಅತ್ಯಂತ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಪ್ರಾಥಮಿಕ ಸಿಐಡಿ ತನಿಖೆಯ ಮೂಲಕ ಸಚಿವರಿಗೆ ಕ್ಲೀನ್‌ ಚಿಟ್‌ ಪಡೆಯಲು ಪ್ರಯತ್ನಿಸುತ್ತಿದೆ.ಸರ್ಕಾರ, ಭ್ರಷ್ಟ ಸಚಿವರ ರಾಜೀನಾಮೆ ಪಡೆಯುವುದು ಬಿಟ್ಟು ಎಸ್‌‍ಐಟಿ ಮೂಲಕ ಪ್ರಾಥಮಿಕ ತನಿಖೆ ಮಾಡಿಸಿ ಕ್ಲೀನ್‌ ಚಿಟ್‌ ಕೊಡಲು ಯತ್ನಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

ಇದಕ್ಕೆ ಪ್ರತಿಯಾಗಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಿಬಿಐಗೆ ದೂರು ನೀಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಿದ್ಧ ಎಂದು ತಿಳಿಸಿದೆ. ಸರ್ಕಾರ ಈ ಕೂಡಲೇ ಭ್ರಷ್ಟ ಸಚಿವನ ರಾಜೀನಾಮೆ ಪಡೆದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದೆ.

RELATED ARTICLES

Latest News