ಬೆಂಗಳೂರು, ಸೆ.15-ಮಳೆಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 37 ಮಸೂದೆಗಳಲ್ಲಿ 32 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು,ಅವುಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದೇ ದಿನದಲ್ಲಿ 15 ಮಸೂದೆಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಿರುದುದು ದಾಖಲೆಯಾಗಿದೆ ಎಂದು ಹೇಳಿದ್ದಾರೆ.ವಿಧಾಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಮಂಡಿಸಲಾಗಿದ್ದ 39 ವಿಧೇಯಕಗಳಲ್ಲಿ ಎರಡು ವಿಧೇಯಕಗಳನ್ನು ಜಂಟಿ ಆಯ್ಕೆ ಸಮಿತಿ ಪರಿಶೀಲನೆಗೆ ಒಪ್ಪಿಸಲಾಗಿದೆ.
ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರದ ಕಾನೂನುಗಳಿಗೆ ತಿದ್ದುಪಡಿಯಾಗಿರುವುದರಿಂದ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ರಾಜ್ಯಪಾಲರು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಸಲ್ಲಿಸಿದ್ದಾರೆ ಎಂದಿದ್ದಾರೆ.
ಒಂದು ಮಸೂದೆಯು ರಾಜ್ಯಪಾಲರ ಬಳಿ ಅಂಕಿತಕ್ಕಾಗಿ ಬಾಕಿಇದ್ದು, ಇನ್ನೊಂದು ಮಸೂಸದೆಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತಿದೆ ಎಂದು ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.