ಬೆಂಗಳೂರು,ಜ.26-ಪ್ರಸ್ತುತ ಕೋವಿಡ್ 3ನೇ ಅಲೆ ಎದುರಾಗಿದ್ದು, ಎಲ್ಲರ ಆರೋಗ್ಯದ ಹಿತಕ್ಕಾಗಿ ಪ್ರತಿಯೊಬ್ಬರೂ ಭೌತಿಕ ಅಂತರ, ಮುಖ ಗವಸು ಹಾಗೂ ಸಾನಿಟೈಸರ್ ಬಳಕೆಯ(ಎಸ್ಎಂಎಸ್) ಎಂಬ ಮೂರು ಮಂತ್ರಗಳನ್ನು ಪಾಲಿಸಬೇಕೆಂದು ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ನಮಗೆ ಎದುರಾಗಿರುವ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು. ಯಾವುದೇ ರೀತಿಯಲ್ಲೂ ಅಲಕ್ಷ್ಯ ಮಾಡುವುದು ಸರಿಯಲ್ಲ. ನಿಮ್ಮ ಹಾಗೂ ಬೇರೊಬ್ಬರ ಆರೋಗ್ಯದ ದೃಷ್ಟಿಯಿಂದ ಮೂರು ಮಂತ್ರಗಳನ್ನು ನಿರಂತರವಾಗಿ ಪಾಲಿಸುವ ಮೂಲಕ ಕೋವಿಡ್ ವಿರುದ್ದ ಹೋರಾಟ ಮಾಡಬೇಕೆಂದು ಮನವಿ ಮಾಡಿದರು.
ದೇಶದ 73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ 16 ಪುಟಗಳ ಭಾಷಣದಲ್ಲಿ ಯಾವುದೇ ಹೊಸ ಕೊಡುಗೆಗಳಾಗಿ ಅಥವಾ ಯೋಜನೆಯನ್ನು ಯೋಚನೆ ಮಾಡದೆ ಕೇವಲ ಸರ್ಕಾರ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳು, ಜನತೆಗೆ ನೀಡಿರುವ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.
2020-21ರಲ್ಲಿ ಜಗತ್ತು ಕೋವಿಡ್ ಸವಾಲನ್ನು ನಿಭಾಯಿಸಲು ಹೆಣಗಾಡಿತು. ಆದರೆ ನಮ್ಮ ಸರ್ಕಾರ ಇದನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಕೋವಿಡ್ ಪರಿಣಾಮವನ್ನು ತಗ್ಗಿಸಲು ಹಗಲಿರುಳು ಶ್ರಮಿಸಿದ್ದು, ಇದಕ್ಕೆ ಜನತೆಯ ಸಹಕಾರವು ಮುಖ್ಯವಾಗಿದೆ ಎಂದು ಪ್ರಶಂಸಿಸಿದರು.
ಹೆಚ್ಚುವರಿ ಆರೋಗ್ಯ, ಮೂಲಸೌಕರ್ಯವನ್ನು ಸೃಷ್ಟಿಸಿ ಆಕ್ಷಿಜನ್ ಸಿಲಿಂಡರ್ಗಳು, ವೆಂಟಿಲೇಟರ್ಗಳ ಉತ್ಪಾದನೆ ಸಾಮಥ್ರ್ಯವನ್ನು ಹೆಚ್ಚಿಸಲಾಗಿದೆ. ದೇಶವು ಎರಡು ಲಸಿಕೆಗಳನ್ನು ಉತ್ಪಾದಿಸಿ ವಿದೇಶಗಳಿಗೂ ಸಹ ರಫ್ತು ಮಾಡಿತ್ತು. ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಲು ಕೇಂದ್ರದ ಜೊತೆ ನಾವು ನಿರಂತರವಾಗಿ ಸಂಪರ್ಕ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.
ಈ ಸಾಂಕ್ರಾಮಿಕ ರೋಗದ ವಿರುದ್ಧ ಅವಿರತವಾಗಿ ಶ್ರಮಿಸಿದ ವೈದ್ಯರು, ನರ್ಸ್ಗಳು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ವಿಶೇಷ ಕೃತಜ್ಞತೆಗಳು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ನಡೆಸಿದರು ಎಂದು ಪ್ರಶಂಸಿಸಿದರು.
ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ತೆಗೆದುಕೊಂಡು ಕ್ರಮಕ್ಕೆ ನಾನು ಸ್ವಾಗತಿಸುತ್ತೇನೆ. ತಂತ್ರಜ್ಞಾನದ ಮೂಲಕ ವಾರ್ರೂಮ್ ನಿರ್ವಹಣೆ, ಟೆಲಿ ಮೆಡಿಸಿನ್, ಸೋಂಕಿತರ ಗುರುತಿಸುವಿಕೆ, ಕ್ವಾರಂಟೈನ್ ನಿರ್ವಹಣೆ ಮೊದಲಾದಂತಹ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಪರಿಣಾಮಕಾರಿಯಾಗಿ ನಿರ್ವಹಿಸಲಾಗಿದೆ. ದೇಶದ ಇತರೆ ಭಾಗಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೋವಿಡ್ ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದರು.
ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿಪತ್ತಿನ ಸವಾಲನ್ನು ಸರ್ಕಾರ ಸಮರ್ಥವಾಗಿ ಎದುರಿಸಿದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಜನತೆಗಾಗಿ ಹೊಸ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅಮೃತ ಗ್ರಾಮ ಪಂಚಾಯ್ತಿಗಳ ಅಮೃತರಥ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ ಮೂಲಸೌಕರ್ಯ ಕಾರ್ಯಕ್ರಮ, ಅಮೃತ ಅಂಗನವಾಡಿ ಕೇಂದ್ರಗಳು, ಅಮೃತ ನಗರೋತ್ಥಾನ ಸೇರಿದಂತೆ 19 ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. 2023 ಆಗಸ್ಟ್ 15ರೊಳಗೆ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಗುರಿ ನೀಡಲಾಗಿದೆ ಎಂದರು.
ಕೃಷಿ ವಲಯದಲ್ಲಿ ಬದಲಾವಣೆ ತರಲು ಸರ್ಕಾರ ಜಲಾನಯನ ಅಭಿವೃದ್ಧಿಗೆ ಗಮನಹರಿಸಿದೆ. 2021-22ನೇ ಸಾಲಿನಲ್ಲಿ 1472 ಕೋಟಿ ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಮೊಬೈಲ್ ಮತ್ತು ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆಯನ್ನು ಗ್ರಾಮ ಮಟ್ಟದ ಸ್ಥಳೀಯ ಯುವಕರ ಮೂಲಕ ಅನುಷ್ಠಾನಗೊಳಿಸಲಾಗಿದೆ. 2022-23ನೇ ಸಾಲಿನಲ್ಲಿ 12,76,868 ರೈತರು ಬೆಳೆ ಸಮೀಕ್ಷೆಯಡಿ ಹೆಸರು ನೊಂದಾಯಿಸಿಕೊಂಡಿದ್ದಾರೆ. 256.95 ಲಕ್ಷ ಪ್ರದೇಶವನ್ನು ಸಮೀಕ್ಷೆಯಡಿ ಜಾರಿಗೆ ತರಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಲು 4.41 ಕೋಟಿ ಹಣವನ್ನು 16,176 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.
ಆರೋಗ್ಯ ಇಲಾಖೆಯಲ್ಲಿ ವೈದ್ಯಾಕಾರಿಗಳನ್ನು ಭರ್ತಿ ಮಾಡಲು ವಿಶೇಷ ಸಮಿತಿಯನ್ನು ರಚಿಸಿ ಆರು ತಿಂಗಳ ಅವಯೊಳಗೆ 746 ತಂತ್ರಜ್ಞರು, 1048 ಸಾಮಾನ್ಯ ಕರ್ತವ್ಯ ವೈದ್ಯಾಕಾರಿಗಳನ್ನು ನೇಮಕ ಮಾಡಲಾಗಿದೆ.
2ನೇ ಅಲೆಯ ಲಾಕ್ಡೌನ್ ಸಂದರ್ಭದಲ್ಲಿ 11,82,307 ಲಕ್ಷ ಕಾರ್ಮಿಕರಿಗೆ ತಲಾ ಎರಡು ಸಾವಿರ ರೂಗಳಂತೆ 236.46 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯು 14,727 ಸಂಘಟಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ 628.18 ಕೋಟಿ ರೂ.ಗಳನ್ನು ವಿತರಿಸಲಾಗಿದೆ ಎಂದು ಅಂಕಿಸಂಕಿಗಳ ಸಮೇತ ಮಾಹಿತಿ ನೀಡಿದರು.
ಕಲಬುರಗಿ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಹಾಸನ, ಕಾರವಾರ ಮತ್ತು ರಾಯಚೂರು ನಗರದ ಹೊರವಲಯಗಳಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಜಮೀನು ಭೂ ಸ್ವಾೀನಪಡಿಸಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಗಳ ವಿವಿಧ ಘಟಕಗಳಿಗೆ ಶಸ್ತ್ರಾಸ್ತ್ರಗಳು, ವಾಹನಗಳು ಮತ್ತು ವೈಜ್ಞಾನಿಕ ಉಪಕರಣಗಳು ಮುಂತಾದ ಖರೀದಿಗಾಗಿ ಕೇಂದ್ರ ಸರ್ಕಾರದ 14.23 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 13.39 ಕೋಟಿ ಬಿಡುಗಡೆ ಮಾಡಲಾಗಿದೆ.
ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಮತ್ತು ವಿವಿಧ ಇಲಾಖೆಗಳ ಸೇವೆಗಳಲ್ಲಿನ ಲೋಪದೋಷಗಳಿಗೆ ಸಂಬಂಸಿದಂತೆ ದೂರುಗಳನ್ನು ದಾಖಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸೇವಾ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
ಪ್ರತಿಯೊಂದು ಇಲಾಖೆಗಳ ಯೋಜನೆ ಮತ್ತು ಸ್ಕೀಮ್ಗಳನ್ನು ಒಂದೇ ಸೂರಿನಡಿ ತಂದು ಅವುಗಳ ಅನುಷ್ಠಾನಕ್ಕಾಗಿ ಖಚಿತಪಡಿಸಲು ಅರ್ಜಿಗಳನ್ನು ಸಲ್ಲಿಕೆಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುವಿದಾ ವೆಬ್ ತಾಣವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರವು ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜೀವನದ ಆರ್ಥಿಕತೆ ಸುಧಾರಿಸಲು ಹಾಗೂ ನ್ಯಾಯಬದ್ದ ಹಕ್ಕುಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ. 2020-21ರಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಗಳ ಕಾರ್ಯಕ್ರಮಗಳಡಿ 26 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ. ಈಗಾಗಲೇ ಇದರಲ್ಲಿ 11 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ.
ಹಿಂದುಳಿದ ವರ್ಗಗಳ ವಸತಿನಿಲಯಗಳಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರಿಗಾಗಿ ಕರಾಟೆ, ಜುಡೊ, ಟೆಕ್ವಾಂಡೋ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರ ಬ್ಯಾಂಕ್ ಖಾತೆಗಳಿಗೆ 5000 ರೂ.ಗಳನ್ನು ಜಮೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿಗೂ ಆದ್ಯತೆ:
ಬೆಳೆಯುತ್ತಿರುವ ಬೆಂಗಳೂರಿಗೂ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಸ್ಮಾರ್ಟ್ ಯೋಜನೆಯಡಿ 158.27 ಕಿ.ಮೀ ಮಾರ್ಗವನ್ನು ಒಳಗೊಂಡ 77 ರಸ್ತೆಗಳನ್ನು ವೈಟ್ಯಾಪಿಂಗ್ಗಾಗಿ ಆಯ್ಕೆ ಮಾಡಲಾಗಿದೆ. ಈ ಪೈಕಿ 83.91 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಪಾದಚಾರಿಸ್ನೇಹಿ ರಸ್ತೆಗಳನ್ನು ಒದಗಿಸಲು ಮೊದಲ ಹಂತದಲ್ಲಿ 17 ಕಿ.ಮೀ ಮಾರ್ಗದ 12 ರಸ್ತೆ, 2ನೇ ಹಂತದಲ್ಲಿ 16 ಕಿ.ಮೀ ಮಾರ್ಗದ 35 ರಸ್ತೆ ಕಾಮಗಾರಿಗಳನ್ನು ಕ
