ಮಂಗಳೂರಿನ ಉಳ್ಳಾಲದ ಬಳಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳ ಸಂಚು

ಮಂಗಳೂರು,ಅ.20– ನಗರದ ಹೊರವಲಯದ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ದುಷ್ಕರ್ಮಿಗಳು ಜಲ್ಲಿ ಕಲ್ಲುಗಳನ್ನು ಸುರಿದು ದುಷ್ಕೃತ್ಯಕ್ಕೆ ಮುಂದಾಗಿರುವ ಘಟನೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿದ್ದು,ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ತಡರಾತ್ರಿ ತೊಕ್ಕೊಟ್ಟುವಿನ ಬಳಿ ನಡೆದಿದೆ. ರಾತ್ರಿ ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಜಲ್ಲಿ ಕಲ್ಲುಗಳನ್ನು ಸುರಿದಿದ್ದರು,ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಪ್ರಯಾಣಿಕರಿಗೆ ಆತಂಕ ಉಂಟಾಗಿತ್ತು. ಬಳಿಕ … Continue reading ಮಂಗಳೂರಿನ ಉಳ್ಳಾಲದ ಬಳಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳ ಸಂಚು