Thursday, September 4, 2025
Homeರಾಜ್ಯಜಿಎಸ್‌‍ಟಿ ಕಡಿತಗೊಳಿಸಿ ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಕುಮಾರಸ್ವಾಮಿ

ಜಿಎಸ್‌‍ಟಿ ಕಡಿತಗೊಳಿಸಿ ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಕುಮಾರಸ್ವಾಮಿ

ಬೆಂಗಳೂರು, ಸೆ.4- ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌‍ಟಿ ಕಡಿತಗೊಳಿಸುವ ಮೂಲಕ ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದ್ದಾರೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಪ್ರಶಂಸಿಸಿದ್ದಾರೆ. ಈ ಸಂಬಂಧ ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತನಿರ್ಭರಭಾರತ್‌ ಅನ್ನು ಬಲಪಡಿಸುವ ಒಂದು ಪರಿವರ್ತನಾತಕ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಹೊಸ ಸುಧಾರಣೆಯೊಂದಿಗೆ ಜಿಎಸ್‌‍ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು ಶೇ. 5 ಮತ್ತು ಶೇ.18 ರಷ್ಟಾಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಎಂಎಸ್‌‍ಎಂಇಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಹೇಳಿದ್ದಾರೆ.
ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

RELATED ARTICLES

Latest News