Thursday, May 2, 2024
Homeರಾಷ್ಟ್ರೀಯಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍

ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍

ಗಾಂಧಿನಗರ, ಜ.16- ಗುಜರಾತ್‍ನ ಖ್ಯಾತ ಚಿನ್ನಾಭರಣ ಉದ್ಯಮಿ ಮುಖೇಶ್ ಪಟೇಲ್ ಅವರು ಅಯೋಧ್ಯೆಯ ಶ್ರೀರಾಮನಿಗಾಗಿ 11 ಕೋಟಿ ರೂ. ಮೌಲ್ಯದ ಮುತ್ತು-ರತ್ನ-ವಜ್ರಗಳಿಂದ ಕೂಡಿದ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ.

ಸೂರತ್‍ನಲ್ಲಿ ಗ್ರೀನ್ ಲ್ಯಾಬ್ ಡೈಮಂಡ್ ಕಂಪೆನಿ ಮಾಲೀಕರಾಗಿರುವ ಮುಖೇಶ್ ಪಟೇಲ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಕನಸು ಕಂಡಿದ್ದರು. ಅದರಂತೆ ಅದು ಸಾಕಾರಗೊಂಡಾಗ ಭಾವಪರವಶರಾಗಿರುವ ಅವರು ಶ್ರೀರಾಮನಿಗಾಗಿ ಆರು ಕೆಜಿ ಚಿನ್ನ ಬಳಸಿ ವಜ್ರ, ಮುತ್ತು, ಪಚ್ಚೆ ಸೇರಿದಂತೆ ಇತರ ಬೆಲೆಬಾಳುವ ವಸ್ತುಗಳನ್ನು ಅಳವಡಿಸಿ ಚಿನ್ನದ ಕಿರೀಟವನ್ನು ತಯಾರಿಸಿ ಅದನ್ನು ಶ್ರೀರಾಮನಿಗೆ ಸಮರ್ಪಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್

ಸುಮಾರು ಐದು ತಿಂಗಳ ಕಾಲ ವ್ರತ ಮಾಡಿ ಮಡಿಯಿಂದ ಈ ಕಿರೀಟ ತಯಾರಿಸಲಾಗಿದೆ. ನನ್ನ ತಂದೆ-ತಾಯಿ ಜತೆ ಇದನ್ನು ಶ್ರೀರಾಮ ಮಂದಿರ ಟ್ರಸ್ಟ್‍ಗೆ ಹಸ್ತಾಂತರಿಸಿದ್ದು, ನನಗೆ ಇದೊಂದು ಪವಿತ್ರ ಹಾಗೂ ಅವಿಸ್ಮರಣೀಯ ದಿನವಾಗಿದೆ ಎಂದು ಮುಖೇಶ್ ಪಟೇಲ್ ಹೇಳಿದ್ದಾರೆ.

RELATED ARTICLES

Latest News