Monday, June 23, 2025
Homeರಾಜ್ಯಹೆಚ್‌.ಡಿ.ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ

ಹೆಚ್‌.ಡಿ.ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ

H.D. Deve Gowda conferred with Sri Ganga Samrata Sripurusha Award

ಬೆಂಗಳೂರು, ಜೂ.23- ನಾಡಿನ ಸಂತಶ್ರೇಷ್ಠರ ದಿವ್ಯ ಸಾನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌‍ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರುಗಳೆಲ್ಲರೂ ದೇವೇಗೌಡರಿಗೆ ಶ್ರೀ ಹೆಚ್‌.ಡಿ.ದೇವೇಗೌಡ ಅಭಿನಂದನಾ ಸಮಿತಿ ನಗರದಲ್ಲಿ ಹಮಿಕೊಂಡಿದ್ದ ಸಮಾರಂಭದಲ್ಲಿ ಶ್ರೀ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.
ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ ಅವರಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ತೀವ್ರ ಗದ್ಗದಿತರಾದ ಮಾಜಿ ಪ್ರಧಾನಿಗಳು, ತಮ ಪತ್ನಿ ಹಾಗೂ ತಂದೆ-ತಾಯಿ ಅವರನ್ನು ಸರಿಸುವಾಗ ತಮ ಕಣ್ಣಾಲಿಗಳನ್ನು ತುಂಬಿಕೊಂಡರು. ಕೆಲಕಾಲ ಯಾವ ಮಾತನ್ನೂ ಆಡದೆ ಮೌನಕ್ಕೆ ಶರಣಾದರು.ಶ್ರೀಮತಿ ಚನ್ನಮ ಅವರು ಎಲ್ಲಾ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಅನೇಕ ಕಷ್ಟಗಳ ಜೊತೆಗೆ ನನ್ನ ಗೌರವ ಉಳಿಸಿದ್ದಾರೆ. ಅವರ ಕೊಡುಗೆ ನೆನೆಸಿಕೊಳ್ಳುತ್ತೇನೆ. ಎಲ್ಲರ ಮುಂದೆ ನಮನ್ನು ನಿಲ್ಲುವಂತೆ ಶಕ್ತಿ ತಂದುಕೊಟ್ಟವರು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದಭೂಷಣ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಎಂದು ಅವರು ಗದ್ಗದಿತರಾದರು.


ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಕನ್ನಡಿಗರು ಸೇರಿ ಹದಿನಾರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿ ಕೊಟ್ಟಿದ್ದರು. ಅದರ ಪರಿಣಾಮವಾಗಿ ನಾನು ಪ್ರಧಾನಿಯಾಗಲು ಸಾಧ್ಯವಾಯಿತು ಎಂದ ದೇವೇಗೌಡರು, ಇದು ನನ್ನ ಜೀವನದ ಸಂಧ್ಯಾಕಾಲ. ನಾನು ಇನ್ನೇನು ಮಾಡಲು ಸಾಧ್ಯ. ಆದರೂ ರಾಷ್ಟ್ರದ, ನಾಡಿನ ಜನರಿಗೆ ಏನಾದರೂ ಕಿಂಚಿತ್ತಾದರೂ ಅಳಿಲು ಸೇವೆ ಮಾಡಬೇಕು ಎನ್ನುವುದು ನನ್ನ ಮಹದಾಸೆ ಎಂದು ಅವರು ಹೇಳಿದರು.

ನನಗೆ 93ನೇ ವಯಸ್ಸಿನಲ್ಲಿ ಜೀವನದ ಕೊನೆ ದಿನಗಳಲ್ಲಿ ಈ ಹಂತದಲ್ಲಿ ನಿಮ ಆಶೀರ್ವಾದ ನನಗೆ ಬಹಳ ಸಮಾಧಾನ ತಂದಿದೆ. 65 ವರ್ಷಗಳ ರಾಜಕಾರಣದಲ್ಲಿ ನನ್ನನ್ನು ಎಲ್ಲಾ ಸಮಾಜದವರು ಬೆಳೆಸಿದ್ದಾರೆ. ಯಾವುದೇ ಒಂದು ಸಮಾಜ ಅಲ್ಲ, ಎಲ್ಲರೂ ನನ್ನನ್ನು ಎತ್ತಿ ಆಡಿಸಿಕೊಂಡು ಬಂದಿದ್ದಾರೆ. ಪ್ರಧಾನಿಯಾಗಿ ರೈತನ ಮಗ ಕೆಲಸ ಮಾಡಿದ್ದಾನೆ. ನಾಲ್ಕು ಎಕರೆ ಜಮೀನು ಇಟ್ಟುಕೊಂಡಿದ್ದ ರೈತನ ಮಗ ಆ ಸ್ಥಾನಕ್ಕೆ ಹೋಗಬೇಕಾದರೆ ಈ ರಾಜ್ಯದ ಎಲ್ಲ ಸಮಾಜಗಳವರು ಸಹಾಯ ಮಾಡಿದ್ದಾರೆ. ಇದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಗೌಡರು ಭಾವುಕರಾಗಿ ನುಡಿದರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ಒಮೆ ಕಾಲಿಗೆ ನಮಸ್ಕಾರ ಮಾಡಿ, ಪಕ್ಷ ಉಳಿಸೋಣ. ನಡೆಯಿರಿ ಎಂದು ಹೇಳಿದ್ದೆ. ಆದರೆ ಅವರು, ನೀನು ಶತ್ರುಗಳನ್ನು ಸೃಷ್ಟಿ ಮಾಡಿಕೊಳ್ಳುತ್ತೀಯಾ ಎಂದರು. ನೀನು ಸತ್ಯ ಹೇಳುತ್ತೀಯಾ, ಅದರ ಜೊತೆಗೆ ನಗ್ನಸತ್ಯಗಳನ್ನು ಹೇಳುತ್ತೀಯಾ. ಅದಕ್ಕೆ ನಿನಗೆ ಹೆಚ್ಚು ಶತ್ರುಗಳು ಹುಟ್ಟಿಕೊಳ್ಳತ್ತಾರೆ ಎಂದು ಹೇಳಿದ್ದರು. ಅವರ ಮಾತು ನನಗೆ ಚೆನ್ನಾಗಿ ನೆನಪಿದೆ. ಆದರೆ ಸತ್ಯಕ್ಕೆ ನಾನು ಯಾವತ್ತೂ ಬೆನ್ನು ತೋರಿಸಿದವನಲ್ಲ ಎಂದು ಅವರು ಹಳೆಯ ರಾಜಕಾರಣವನ್ನು ನೆನಪು ಮಾಡಿಕೊಂಡರು.

ಮೋದಿ ಅವರಿಂದ ನೀರಾವರಿ ಸಂಕಷ್ಟ ಪರಿಹಾರ ಸಾಧ್ಯ: ಕರ್ನಾಟಕ ರಾಜ್ಯ ಎದುರಿಸುತ್ತಿರುವ ಜ್ವಲಂತ ನೀರಾವರಿ ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಎಂದು ಇದೇ ವೇಳೆ ದೇವೇಗೌಡರು ಹೇಳಿದರು. 93ರ ಈ ಇಳಿ ವಯಸ್ಸಿನಲ್ಲಿ ನಾನು ಏನು ಮಾಡಬಲ್ಲೇ? ಆದರೆ ನಾನು ಒಂದು ಮಾತು ಹೇಳುತ್ತೇನೆ. ನಿನ್ನೆಯಷ್ಟೇ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನರ್ಮದಾ ನದಿ ನೀರು ವಿಚಾರಕ್ಕೆ ಟ್ರಿಬ್ಯೂನಲ್‌ಗೆ ಪತ್ರ ಬರೆದಿದ್ದಾರೆ. ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ. ಟ್ರಿಬ್ಯೂನಲ್‌ಗೆ ಪತ್ರ ಬರೆದು ಕರ್ನಾಟಕದಲ್ಲಿ ನೀರಿನ ಸಮಸ್ಯೆ ಇಲ್ಲ ಅಂತ ಹೇಳಿದ್ದಾರೆ. ಅದಕ್ಕೆ ನಾನು ಪತ್ರ ಬರೆದಿದ್ದೇನೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ನನ್ನ ಜೊತೆಗೆ ಮಾತಾಡಿದರು. ಗೋದಾವರಿ ನದಿ ನೀರಿನಲ್ಲಿ ನಮಗೂ ಪಾಲು ಸಿಗಬೇಕು ಎಂದು ಅವರು ಒತ್ತಿ ಹೇಳಿದರು.

ನನ್ನ ನಾಡಿನ ಸಮಸ್ಯೆಗಳು ಪರಿಹಾರ ಕಾಣಬೇಕು. ನನ್ನ ಜನರು ತಲೆತಲಾಂತರದಿಂದ ಅನುಭವಿಸೋದನ್ನು ಈ ಆತ ನೋಡುತ್ತದೆ. ನಾನು ನರಕದಲ್ಲಿರುತ್ತೇನೋ, ಸ್ವರ್ಗದಲ್ಲಿರುತ್ತೇನೋ ಗೊತ್ತಿಲ್ಲ. ಆದರೆ, ನನ್ನ ಆತ ನೋಡುತ್ತಿರುತ್ತದೆ. ಹೀಗಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಗೋದಾವರಿ ನೀರಿಗೆ, ಮಹದಾಯಿ ನೀರು ಯೋಜನೆ ಆಗಬೇಕು. ಚಳ್ಳಕೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರದಂತಹ ಬಯಲು ಪ್ರದೇಶಗಳಿಗೆ ನೀರು ಸಿಗಬೇಕು. ರಾಜ್ಯಸಭೆಯಲ್ಲಿ ನನ್ನ ಹೋರಾಟ ಇನ್ನೊಂದುಕಾಲು ವರ್ಷ ಇರಬಹುದು. ಆದ್ದರಿಂದ ಎಲ್ಲರೂ ಇವತ್ತು ನನನ್ನು ಎತ್ತಿಕೊಂಡು ಬಂದು ಕೂರಿಸಿದ್ದಾರೆ ಎಂದು ಅವರು ಹೇಳಿದರು.

ನನ್ನ ಕಾಲಿಗೆ ನೋವು ಇರಬಹುದು, ಆದರೆ ತಲೆಗೆ ನೋವಿಲ್ಲ. ನಮ ತಾಯಿ ಯಾವ ಎದೆ ಹಾಲು ಕುಡಿಸಿ ಸಾಕಿದ್ದಳೋ ಗೊತ್ತಿಲ್ಲ. ನನ್ನ ತಾಯಿ ಈಶ್ವರನ ಭಕ್ತೆ, ಅವರ ಮಗ ನಾನು. ಮಾತೃ ದೇವೋಭವ, ಪಿತೃ ದೇವೋಭವ ಎನ್ನುತ್ತೇವೆ ಅಲ್ಲವೇ? ನನ್ನ ತಂದೆಯ ಮೊದಲ ಪತ್ನಿಗೆ ನಾಲ್ಕು ಮಕ್ಕಳು. ಅವರೆಲ್ಲರೂ ತೀರಿ ಹೋದರು. ಆಮೇಲೆ ನನ್ನ ದೊಡ್ಡಮ ಕೂಡ ತೀರಿ ಹೋದರು. ನಾನು ಎರಡನೇ ಹೆಂಡತಿಯ ಮೊದಲನೇ ಮಗ. ನನಗೆ ಕಾಲು ನೋವು ಇರಬಹುದು. ಆದರೆ, ಪಾರ್ಲಿಮೆಂಟ್‌ನಲ್ಲಿ ಹೋರಾಟ ಮಾಡುವ ಶಕ್ತಿ ಇದೆ. ಪ್ರಧಾನಮಂತ್ರಿಗಳನ್ನು ಒಪ್ಪಿಸುವ ಶಕ್ತಿಯಿದೆ ಎಂದು ದೇವೇಗೌಡರು ನುಡಿದರು.
ದೇವೇಗೌಡರ 93ನೇ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರದ 93 ಸಾಧಕರಿಗೆ ಹೆಚ್‌.ಡಿ.ದೇವೇಗೌಡ ಪ್ರಶಸ್ತಿ ನೀಡಿ ಸನಾನಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿಗಳೆಲ್ಲರೂ ಆಶೀರ್ವಚನ ನೀಡಿ ದೇವೇಗೌಡರನ್ನು ಆಶೀರ್ವದಿಸಿದರು.

ಅಪರೂಪದ ಛಾಯಾಚಿತ್ರ ಪ್ರದರ್ಶನ:
ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ದೇವೇಗೌಡರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿದರು. ದೇವೇಗೌಡರ ಅವರ ಬದುಕಿನ ಬಹುತೇಕ ಎಲ್ಲಾ ಚಿತ್ರಗಳ ಅಮೂಲ್ಯ ಸಂಗ್ರಹ ಅದಾಗಿತ್ತು. ಸಚಿವ ಕುಮಾರಸ್ವಾಮಿ ಅವರು ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇವೇಗೌಡರು ತಮ ಭಾಷಣದಲ್ಲಿ, ನಮ ನಡುವಿನ ರೈತನ ಮಗ ಇಷ್ಟು ಎತ್ತರಕ್ಕೆ ಹೋಗಿದ್ದಾನೆ ಎನ್ನುವುದನ್ನು ಆ ಚಿತ್ರಗಳು ಹೇಳುತ್ತವೆ. ಈ ಸಂಸ್ಥೆಯ ಅನುಮತಿ ಪಡೆದು ಇನ್ನೊಂದೆರಡು ದಿನಗಳ ಕಾಲ ಪ್ರದರ್ಶನ ಮುಂದುವರಿಸಲು ಸಾಧ್ಯವೇ ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು, ಸುಪ್ರೀಂ ಕೋರ್ಟ್‌ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ, ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ವಿಧಾನಪರಿಷತ್‌ ಮಾಜಿ ಸದಸ್ಯ ಅ. ದೇವೇಗೌಡ, ಹೆಚ್‌.ಡಿ. ದೇವೆಗೌಡರ ಕುಟುಂಬ ಸದಸ್ಯರು, ಗಣ್ಯರು, ಗೌಡರ ಅಮಾನಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

RELATED ARTICLES

Latest News