Friday, April 19, 2024
Homeರಾಜ್ಯವಿಜಯದಶಮಿ ನಂತರ ಜೆಡಿಎಸ್ ಪುನರ್ ಸಂಘಟನೆ : ಕುಮಾರಸ್ವಾಮಿ

ವಿಜಯದಶಮಿ ನಂತರ ಜೆಡಿಎಸ್ ಪುನರ್ ಸಂಘಟನೆ : ಕುಮಾರಸ್ವಾಮಿ

ಬೆಂಗಳೂರು,ಅ.19- ವಿಜಯದಶಮಿ ಮುಗಿದ ನಂತರ ಪಕ್ಷದ ಮತ್ತೊಂದು ಸಭೆ ನಡೆಸಿ ಪಕ್ಷದ ಪುನರ್ ಸಂಘಟನೆ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಹಲವು ನಿರ್ಣಯಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ವಿಜಯದಶಮಿ ನಂತರ ಮತ್ತೊಂದು ಸಭೆ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರದ ಲೋಪ ದೋಷಗಳ ಬಗ್ಗೆ ಪ್ರಸ್ತಾಪ ಮಾಡಿ ಜನಪರ ಹೋರಾಟ ಮಾಡುವುದು, ಅಧಿವೇಶನದಲ್ಲಿ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಯಾವ ಇಲಾಖೆಯಡಿ ಏನೇನು ಲೂಟಿಯಾಗಿದೆ ಎಲ್ಲ ಅಂಶಗಳನ್ನು ಬಹಿರಂಗಪಡಿಸುವುದಾಗಿ ಹೇಳಿದರು.

ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ

ವಿಧಾನಸಭೆ ಚುನಾವಣೆ ನಂತರ ಕೆಲವು ರಾಜಕೀಯ ಘಟನೆಗಳು ನಡೆದಿರುವ ಹಿನ್ನಲೆಯಲ್ಲಿ ಹಳೆಯ ರಾಜ್ಯ ಘಟಕವನ್ನು ವಿಸರ್ಜನೆ ಮಾಡಿ ಇಂದು ಹಡಹಾಕ್ ಸಮಿತಿ ರಚನೆ ಮಾಡಲಾಗುತ್ತಿದ್ದು, ಆ ಮೂಲಕ ಪಕ್ಷ ಪುನಶ್ಚೇತನ ಮಾಡಲಾಗುತ್ತದೆ ಎಂದು ತಿಳಿಸಿದರು.

ಹಂಗಾಮಿ ಅಧ್ಯಕ್ಷರ ಜವಾಬ್ದಾರಿಯನ್ನು ನನಗೆ ನೀಡಿದ್ದು, ಎಲ್ಲರ ಜೊತೆಗೂಡಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು. ಸಭೆಯಲ್ಲಿ 30 ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು.

RELATED ARTICLES

Latest News