Sunday, September 8, 2024
Homeರಾಜ್ಯಹಾಸನಾಂಬ ದರ್ಶನಕ್ಕೆ ಕ್ಷಣಗಣನೆ

ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ

ಹಾಸನ, ನ.1- ನಾಳೆಯಿಂದ ನ.15ರವರೆಗೆ ನಡೆಯುವ ಹಾಸನಾಂಬ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನದ ಸುತ್ತಮುತ್ತ ಬ್ಯಾರಿಕೇಡ್ ನಿರ್ಮಾಣ ವಿದ್ಯುತ್ ಅಲಂಕಾರ , ಹೂವಿನ ಅಲಂಕಾರ ಸೇರಿದಂತೆ ಭಕ್ತರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ತಯಾರಿಗಳು ಮುಕ್ತಾಯದ ಹಂತದಲ್ಲಿ ಇದೆ.

ದೇವಸ್ಥಾನದ ಸುತ್ತಮುತ್ತ ಸೇರಿದಂತೆ ನಗರಸಭೆ ಎದುರು ರಸ್ತೆಯಿಂದ ದೇವಾಲಯದವರೆಗೆ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು ಹಾಗೂ ನೆಲಹಾಸು (ಮ್ಯಾಟ)ನ್ನು ಹಾಕಲಾಗಿದ್ದು ಅಲ್ಲಲ್ಲಿ ಫ್ಯಾನ್ ವ್ಯವಸ್ಥೆಯನ್ನು ಸಹ ಈ ಬಾರಿ ವಿಶೇಷವಾಗಿ ಮಾಡಲಾಗಿದೆ.

ಬ್ರಾಹ್ಮಣರ ಬೀದಿ ಸೇರಿದಂತೆ ಸಂತೆಪೇಟೆಯಿಂದ ಬರುವ ರಸ್ತೆ ಪಕ್ಕದಲ್ಲಿಯೂ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಇಲ್ಲಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ. ದೇವಾಲಯದ ಗೋಪುರದ ಬಲ ಭಾಗದಲ್ಲಿ ಒಂದು ಸಾವಿರದ ಟಿಕೆಟ್ ಹಾಗೂ ವಿವಿಐಪಿ ಪಾಸ್ ಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದ್ದು ಇಲ್ಲಿಯೇ ಟಿಕೆಟ್ ಕೌಂಟರ್ ಗಳನ್ನುತೆರೆಯಲಾಗಿದೆ.

ದೇವಾಲಯದ ಬಲಭಾಗದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಜರ್ಮನ್ ಟೆಂಟ್ ಅನ್ನು ಸಹ ಹಾಕಲಾಗಿದೆ. ವೃದ್ಧರಿಗೆ ಪ್ರತ್ಯೇಕ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವುದು ಈ ಬಾರಿಯ ವಿಶೇಷವಾಗಿದೆ.

ನಗರಸಭೆ ಎದುರಿನ ಪ್ರವೇಶ ದ್ವಾರದಿಂದ ಅಂಗವಿಕಲರಿಗೆ ದರ್ಶನಕ್ಕೆ ಆಗಮಿಸಲು ವೀಲ್ಚೇರಿಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಪ್ರಮುಖ ಪ್ರವೇಶ ದ್ವಾರ ಹಾಗೂ ಇತರೆಡೇ ಪೊಲೀಸ್ ಹಾಗೂ ಹೋಂ ಗಾಡ್ರ್ಸ್‍ಗಳನ್ನು ನಿಯೋಜನೆ ಮಾಡಿ ಸುಲಲಿತ ಹಾಗೂ ತಡೆರಹಿತ ಭಕ್ತರ ಸಾಲು ಸಾಗಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಿಸಿ ಕ್ಯಾಮರಾ ಕಣ್ಗಾವಲು: ಆಯಕಟ್ಟು ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೂ ಬಸ್ತ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಹಾಸನಾಂಬ ದೇವಾಲಯ ಗರ್ಭಗುಡಿಯ ಎಡಭಾಗದಲ್ಲಿ ಈ ಬಾರಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇಲ್ಲಿ ದೇವಾಲಯದ ಸುತ್ತಮುತ್ತ ಹಾಗೂ ಆಯಕಟ್ಟು ಪ್ರದೇಶದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುವ ಸಾರ್ವಜನಿಕರ ಚಲನ ವಲನ ನಿಗ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಶಕ್ತಿ ಯೋಜನೆ : ಲಕ್ಷ ಲಕ್ಷ ಮಹಿಳಾ ಭಕ್ತರ ನಿರೀಕ್ಷೆ: ಶಕ್ತಿ ಯೋಜನೆ ಜಾರಿಯಲ್ಲಿ ಇರುವುದರಿಂದ ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಮಹಿಳಾ ಭಕ್ತರು ಈ ಬಾರಿ ಹಾಸನಾಂಬ ದರ್ಶನೋತ್ಸವಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿದ್ದು ಮಹಿಳೆಯರಿಗೆ ಶೌಚಾಲಯ, ಕುಡಿಯುವ ನೀರು, ಮಜ್ಜಿಗೆ ಸೇರಿದಂತೆ ಮಹಿಳಾ ಪೊಲೀಸ್ ನಿಯೋಜನೆ ಹೆಚ್ಚಿಸಿದೆ. ದೇವಾಲಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಈ ಬಾರಿ ದೊನ್ನೆ ಪ್ರಸಾದ ವಿತರಣೆಯನ್ನು ದೇವಿ ದರ್ಶನದ ಬಳಿಕ ನೀಡಲಾಗುವುದು ಎಂದು ದೇವಸ್ಥಾನ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳಿಂದ ಪರಿಶೀಲನೆ: ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತಾ, ದೇವಸ್ಥಾನ ಆಡಳಿತ ಅಧಿಕಾರಿ ಮಾರುತಿ ಸೇರಿದಂತೆ ಇತರೆ ಕಂದಾಯ ಅಧಿಕಾರಿಗಳು ದೇವಾಲಯದ ಸುತ್ತಮುತ್ತ ಕೈಗೊಂಡಿರುವ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದು ದರ್ಶನೋತ್ಸವ ಯಶಸ್ವಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೇಸ್ತಾನ್ ಧ್ವಜ ಪ್ರದರ್ಶಿಸಿದ ನಾಲ್ವರು ಅರೆಸ್ಟ್

ದಸರಾ ಮಾದರಿ ದೀಪಲಂಕಾರ:
ಈಗಾಗಲೇ ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಮಾದರಿ ದೀಪಲಂಕಾರ ಮಾಡಲಾಗಿದ್ದು ಡೈರಿ ವೃತ್ತ, ಸಂತೆಪೇಟೆ ಸರ್ಕಲ್, ಸುಭಾಷ್ ವೃತ್ತ, ಎನ್‍ಆರ್ ಸರ್ಕಲ್, ಹೇಮಾವತಿ ಪ್ರತಿಮೆ ಎದುರು, ಮಹಾವೀರ ಸರ್ಕಲ್, ಸಹ್ಯಾದ್ರಿ ವೃತ್ತ, ಸಾಲಗಾಮೆ ರಸ್ತೆ, ರೈಲು ನಿಲ್ದಾಣದ ಎದುರು ಸರ್ಕಲ್ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ದೀಪಲಂಕಾರ ಹಾಗೂ ಆರ್ಚ್ ಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
ರಾತ್ರಿ ವೇಳೆ ರಸ್ತೆ ಹಾಗೂ ಸರ್ಕಾರಿ- ಖಾಸಗಿ ಕಟ್ಟಡಗಳು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದ್ದು ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ದರ್ಶನೋತ್ಸವ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮಹಿಳೆಯರಿಗೆ ಹೆಚ್ಚಿನ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಜಿಲ್ಲಾ ಪೊಲೀಸ್ ವರಿಧಿಷ್ಠಾಕಾರಿ ಮೊಹಮ್ಮದ್ ಸುಜಿತಾ ಅವರು ಮಾಹಿತಿ ನೀಡಿದ್ದು 1200 ಪೊಲೀಸ್ ಸಿಬ್ಬಂದಿಯೊಂದಿಗೆ ಹೋಂ ಗಾಡ್ರ್ಸ್ ಗಳನ್ನು ಸಹ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೆ ಇತ್ತೀಚಿಗೆ ದೇವಾಲಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಹಾಗೂ ಬಂದೂಬಸ್ತ್ ಕುರಿತು ಮಾಹಿತಿ ಐಜಿಪಿ ಬೋರಲಿಂಗಯ್ಯ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ತುಲಾಭಾರ ವ್ಯವಸ್ಥೆ :
ಇದೇ ಪ್ರಥಮ ಬಾರಿಗೆ ಭಕ್ತಾದಿಗಳಿಗೆ ತುಲಾಭಾರ ವ್ಯವಸ್ಥೆಯನ್ನು ಮಾಡಲಾಗಿದ್ದು ಹಣ್ಣು , ತರಕಾರಿ , ಧನ ಧಾನ್ಯ ಸೇರಿದಂತೆ ಇತರೆ ವಸ್ತುಗಳ ಮೂಲಕ ತುಲಾಭಾರವನ್ನು ಮಾಡುವ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ತುಲಾಭಾರ ದಲ್ಲಿಯೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಟ್ರಂಪ್ ಅಧ್ಯಕ್ಷ ಚುನಾವಣೆಗೆ ಭಾರಿ ಬೆಂಬಲ

ಇ-ಹುಂಡಿ ವ್ಯವಸ್ಥೆ :
ದೇವಾಲಯ ಗರ್ಭಗುಡಿ ಹಾಗೂ ಸುತ್ತಮುತ್ತ ಈಗಾಗಲೇ ದೇವಾಲಯ ಆಡಳಿತ ಮಂಡಳಿಯಿಂದ ಹಣ ಆಭರಣ ಕಾಣಿಕೆ ಹುಂಡಿಯನ್ನು ಇಡಲಾಗಿದ್ದು ಇದರೊಂದಿಗೆ ಇದೇ ಪ್ರಥಮ ಬಾರಿ ಇ- ಪೇಮೆಂಟ್ ಕ್ಯೂಆರ್ ಕೋಡ್ ಬ್ಯಾನರ್ ವ್ಯವಸ್ಥೆಯನ್ನು ಮಾಡಲಾಗಿದೆ.

RELATED ARTICLES

Latest News