ನವದೆಹಲಿ : ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದುಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇನ್ನು ಘಟನೆಯ ಕುರಿತಂತೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿಯವರು ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಗಾಯಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾವನ್ನಪ್ಪಿದವರ ಕುಟುಂಬಕ್ಕೆ ನನ್ನ ನಮನಗಳು. ಅಪಘಾತದ ಸುದ್ದಿ ಕೇಳಿ ತುಂಬಾ ನೋವಾಗಿದೆ. ಗಣೇಶ ವಿಸರ್ಜನೆ ವೇಳೆ ಇಂತಹ ದುರ್ಘಟನೆ ನಡೆದಿರುವುದು ನಿಜಕ್ಕೂ ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದ್ದಾರೆ.
ಕರ್ನಾಟಕ ಸರ್ಕಾರ ಗಾಯಾಳುಗಳಿಗೆ ಎಲ್ಲಾ ರೀತಿಯ ಚಿಕಿತ್ಸೆ ನೆರವು ನೀಡುತ್ತದೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಅಲ್ಲಿನ ಸರ್ಕಾರ ತ್ವರಿತ ಗತಿಯಲ್ಲಿ ಗಾಯನಗಳಿಗೆ ಚಿಕಿತ್ಸೆ ನೀಡಲಿದೆ ಎಂದು ಹೇಳಿದ್ದಾರೆ. ಘಟನೆಯ ಸುದ್ದಿ ಕೇಳಿ ನನ್ನ ಮನಸ್ಸಿಗೆ ಅಗತ್ಯವಾಗಿದೆ ಇದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ನೊಂದವರ ಕುಟುಂಬದ ಜೊತೆ ಸರಕಾರ ಇರಲಿದೆ .ಎಷ್ಟು ಸಾಧ್ಯವಾದಷ್ಟು ಬೇಗ ಗಾಯಗಳು ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಏಕ್ಸ್ ನಲ್ಲಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಮೂಳೆಹೊಸಹಳ್ಳಿ ಬಳಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬೈಕ್ ಅಪಘಾತ ಸಂಭವಿಸುವುದನ್ನು ತಡೆಗಟ್ಟುವ ವೇಳೆ ಚಾಲಕ
ಬಾರಿ ಸಂಖ್ಯೆಯಲ್ಲಿದ್ದ ಜನರ ಮೇಲೆ ನುಗ್ಗಿದ ಪರಿಣಾಮ 9 ಮಂದಿ ಸಾವನ್ನಪ್ಪಿ 20ಕ್ಕೆ ಹೆಚ್ಚು ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.ಸದ್ಯ ಹಾಸನದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲವರ ಸ್ಥಿತಿ ಈಗಲೂ ಚಿಂತಾ ಜನಕವಾಗಿದೆ.ತೀವ್ರವಾಗಿ ಗಾಯಗೊಂಡಿರುವ ಕೆಲವರನ್ನು ICUನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
- ಮಾಜಿ ಸೈನಿಕನ ಪೊಲೀಸರಿಂದ ಮೇಲೆ ಹಲ್ಲೆ, ಕಮಿಷನರ್ಗೆ ದೂರು
- ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ : ಸಭಾಪತಿ ಬಸವರಾಜ ಹೊರಟ್ಟಿ
- ಹೆಚ್ಡಿಕೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ
- ಹಂತಹಂತವಾಗಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ : ಸಚಿವ ಸತೀಶ್ ಜಾರಕಿಹೊಳಿ
- RSS ಪಥಸಂಚನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಟಿ ತಡೆ, ಸರ್ಕಾರಕ್ಕೆ ಮತ್ತೊಂದು ಹಿನ್ನಡೆ
