Thursday, September 19, 2024
Homeರಾಜ್ಯಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ

ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ

ನವದೆಹಲಿ, ಅ.9- ಶಿರಾಡಿ ಘಾಟ್‌ ರಸ್ತೆ ಸೇರಿದಂತೆ ರಾಜ್ಯದ ಹೆದ್ದಾರಿ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಮಾಜಿ ಪ್ರಧಾನಿಯ ಬೇಡಿಕೆಗೆ ಸಕಾರಾತಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಕರ್ನಾಟಕ ಸರ್ಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಗೆ ಕೆಲವು ಸಾವಿರ ಕೋಟಿಗಳಷ್ಟು ಹಣ ಹೂಡಿಕೆ ಮಾಡಲು ತಮ ಇಲಾಖೆ ಪರಿಗಣಿಸುವುದು ಎಂದು ನಿತಿನ್‌ ಗಡ್ಕರಿ ಅವರು ದೇವೇಗೌಡರಿಗೆ ಭರವಸೆ ನೀಡಿದ್ದಾರೆ.

ಅಭಿವೃದ್ಧಿ ಯೋಜನೆಯು ಸುರಂಗ ತಂತ್ರಜ್ಞಾನ ಬಳಸುವುದನ್ನು ಒಳಗೊಂಡಿರುತ್ತದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದ್ದಾರೆ. ಈ ಮಾಹಿತಿಯನ್ನು ಮಾಜಿ ಪ್ರಧಾನಿ ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

RELATED ARTICLES

Latest News