Saturday, July 27, 2024
Homeರಾಜ್ಯಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್‌.ಡಿ.ರೇವಣ್ಣ

ಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್‌.ಡಿ.ರೇವಣ್ಣ

ಬೆಂಗಳೂರು, ಮೇ 16- ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಸಂಕಷ್ಟ ಪರಿಹಾರಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ತಂದೆ ಮತ್ತು ತಾಯಿ ಅವರ ಆಶೀರ್ವಾದ ಪಡೆದ ಬಳಿಕ ಅವರು, ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ್ದರು. ಇಂದು ಬೆಳ್ಳಿಗ್ಗೆ ಜಯನಗರದಲ್ಲಿರುವ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ..

ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣದಲ್ಲಿ ಅವರನ್ನು ಎಸ್‌‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದ್ದರಿಂದ ನ್ಯಾಯಾಂಗ ಬಂಧನದಲ್ಲಿದ್ದ ರೇವಣ್ಣ ಅವರು ಮಂಗಳವಾರ ಮಧ್ಯಾಹ್ನ ಜೈಲಿನಿಂದ ಬಿಡುಗಡೆಯಾಗಿದ್ದರು.

ಬೆಂಗಳೂರಿನ ತಮ್ಮ ಮನೆಗೆ ಭೇಟಿ ನೀಡಿದ್ದ ಹಲವು ಅಭಿಮಾನಿಗಳೊಂದಿಗೆ ಮಾತಾಡುವಾಗ ಭಾವುಕರಾಗಿದ್ದ ರೇವಣ್ಣ ಅವರು ಇಂದು ಬೆಳಗ್ಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಮಹಾನ್‌ ದೈವಭಕ್ತರಾದ ರೇವಣ್ಣ ಅವರು ಆರೋಪ ಕೇಳಿಬರುವ ಮೊದಲಿನಿಂದಲೂ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುವ ಪರಿಪಾಠವನ್ನು ಇಟ್ಟುಕೊಂಡಿದ್ದರು. ಅದೇ ರೀತಿ ಈಗಲೂ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

RELATED ARTICLES

Latest News