ಬೇಲೂರು,ಜು.2- ಮಗುವಿನೊಂದಿಗೆ ಆಟವಾಡುತ್ತಿದ್ದಾಗಲೇ ತಂದೆಗೆ ಹೃದಯಾಘಾತವಾಗಿ ನಿಧನವಾಗಿರುವ ಘಟನೆ ತಾಲ್ಲೂಕಿನ ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಾದಿಹಳ್ಳಿ ಗ್ರಾಮದ ರವಿಕುಮಾರ್ (30) ಮೃತಪಟ್ಟ ದುರ್ದೈವಿ.ನಿನ್ನೆ ಸಂಜೆ ಮಾದಿಹಳ್ಳಿ ಗ್ರಾಮದಿಂದ ಹೊರಟು ಪತ್ನಿಯ ತವರಾದ ತಾಲ್ಲೂಕಿನ ಯಕಶೆಟ್ಟಿಹಳ್ಳಿ ಗ್ರಾಮಕ್ಕೆ ತೆರಳಿ ಪತ್ನಿಯೊಂದಿಗೆ ಮಾತನಾಡಿ ನಂತರ 9 ತಿಂಗಳ ಮಗುವಿನೊಂದಿಗೆ ಆಟವಾಡುತ್ತಾ ಸಮಯ ಕಳೆಯುತ್ತಿದ್ದರು.
ಕೂಡಲೇ ಎದೆನೋವು ಕಾಣಿಸಿಕೊಂಡು ಹಠಾತ್ತನೆ ಕುಸಿದುಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃಷಿಕರಾದ ರವಿಕುಮಾರ್ ಮದುವೆಯಾಗಿ 2 ವರ್ಷವಾಗಿತ್ತು. ಇತ್ತೀಚೆಗಷ್ಟೇ ಮಗುವಾಗಿದೆ.
ಇವರ ಅಕಾಲಿಕ ನಿಧನದಿಂದ ಕುಟುಂಬ ಸದಸ್ಯರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದ್ದು, ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು. ದಿನದಿಂದ ದಿನಕ್ಕೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ