ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು,ಜು.14- ಕರಾವಳಿ, ಮಲೆನಾಡು, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಈ ಐದು ಜಿಲ್ಲೆಗಳಲ್ಲೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಆಂಕೋಲ, ಕುಮುಟಾ, ಕಡ್ತ, ಗೇರುಸೊಪ್ಪೆ, ಹೊನ್ನಾವರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕೊಡುಗು ಜಿಲ್ಲೆಯ ಬಾಗಮಂಡಲದಲ್ಲಿ ನಿನ್ನೆ ಒಂದೇ ದಿನ 13 ಸೆ.ಮೀ ಮಳೆಯಾಗಿದೆ. ನಿರಂತರ ಮಳೆಯಿಂದ ಮಲೆನಾಡು, ಕರಾವಳಿ ಭಾಗದಲ್ಲಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ಹೊಲಗದ್ದೆಗಳಿಗೂ ನೀರು ತುಂಬಿ ಬೆಳೆಗಳಿಗೂ ಹಾನಿಯಾಗಿದೆ. ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, … Continue reading ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ