Friday, May 3, 2024
Homeರಾಷ್ಟ್ರೀಯಉಳಿಗಮಾನ್ಯ ವ್ಯವಸ್ಥೆ ವಿರುದ್ಧ ಸಮರ ಸಾರುವ ಸಮಯ ಬಂದಿದೆ : ಹೇಮಂತ್ ಸೊರೆನ್

ಉಳಿಗಮಾನ್ಯ ವ್ಯವಸ್ಥೆ ವಿರುದ್ಧ ಸಮರ ಸಾರುವ ಸಮಯ ಬಂದಿದೆ : ಹೇಮಂತ್ ಸೊರೆನ್

ರಾಂಚಿ, ಫೆ.1 (ಪಿಟಿಐ) – ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ.

ನಾನು ಬಲಿಪಶು ಆಗುವುದಿಲ್ಲ ಅಂತಿಮವಾಗಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಸೋರೆನ್ ತನ್ನ ಬಂಧನಕ್ಕೆ ಮುನ್ನ ರೆಕಾರ್ಡ್ ಮಾಡಿದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ತನ್ನನ್ನು ಬಂಧಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸೋರೆನ್ ಹೇಳಿಕೊಂಡಿದ್ದಾರೆ.

ನಕಲಿ ಪ್ರಮಾಣ ಪತ್ರ ವಿಚಾರದಲ್ಲಿ ಠಾಕೂರ್ ಮಧ್ಯಸ್ತಿಕೆಗೆ ಸಾಕ್ಷಿ ಮಲ್ಲಿಕ್ ಮನವಿ

ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೆಎಂಎಂ ನಾಯಕನನ್ನು ತಡರಾತ್ರಿ ಬಂಧಿಸಲಾಗಿದೆ ಮತ್ತು ಪಕ್ಷದ ನಿಷ್ಠಾವಂತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಅವರ ಉತ್ತರಾಧಿಕಾರಿ ಎಂದು ಹೆಸರಿಸಲಾಗಿದೆ.

ಹೇಮಂತ್ ಸೊರೆನ್ ಅವರ ಅಧಿಕೃತ ನಿವಾಸದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಏಳು ಗಂಟೆಗಳ ಕಾಲ ಸತತ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ.

RELATED ARTICLES

Latest News