ಬೆಂಗಳೂರು, ಜೂ.19-ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಿಲೀ್ ಸಿಕ್ಕಿದಂತಾಗಿದೆ.
ನ್ಯಾ. ಇಂದಿರೇಶ್ ಅವರು ಎಸ್ಐಟಿ ರಚ ನೆಗೆ ಮಧ್ಯಂತರ ತಡೆ ನೀಡಿದ್ದಾರೆ. ಕಳೆದ ಜನವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರ ಒತ್ತುವರಿ ಪತ್ತೆಗಾಗಿ ಐಎಎಸ್ ಅಧಿಕಾರಿ ಆಮ್ಲನ್, ಆದಿತ್ಯ ಬಿಶ್ವಾಸ್ ಅವರ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿತ್ತು. ಕೇತಗಾನಹಳ್ಳಿ ಗ್ರಾಮದ 6 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಲಾಗಿದ್ದು, ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿರುವುದನ್ನು ಪ್ರಶ್ನಿಸಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಮಾಡಿರುವುದು ಕಾನೂನು ಬಾಹಿರ, ಎಸ್ಐಟಿ ಕೈಗೊಂಡಿರುವ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಕುಮಾರಸ್ವಾಮಿ ಅವರ ಪರ ಹಿರಿಯ ವಕೀಲ ಉದಯ್ಹೊಳ್ಳ ಮತ್ತು ಎ.ವಿ.ನಿಶಾಂತ್ ಅವರು ವಾದ ಮಂಡಿಸಿದರು.
- ಒಂದೇ ಗಂಟೆಯಲ್ಲಿ ಡಿಸಿಇಟಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ
- ವಿಮಾನ ನಿಲ್ದಾಣಗಳ ಸುತ್ತಮುತ್ತ ಪ್ರದೇಶಗಳಿಗೆ ಬರಲಿದೆ ಹೊಸ ರೂಲ್ಸ್
- ಅಮೆರಿಕ ಕನ್ನಡ ಒಕ್ಕೂಟಗಳಿಂದ ಕಮಲ್ ಹಾಸನ್ ಚಿತ್ರಗಳಿಗೆ ಬಹಿಷ್ಕಾರ
- ಗೊಂದಲದ ಗೂಡಾದ ಬಿಜೆಪಿ- ಜೆಡಿಎಸ್ ಮೈತ್ರಿ
- ದೊಡ್ಡ ವರ್ಗವನ್ನು ಅಂಚಿನಲ್ಲಿಡುವ ಅಸಮಾನತೆ ಪರಿಹರಿಸದಿರುವ ರಾಷ್ಟ್ರ ಪ್ರಗತಿಪರ ಅಲ್ಲ ; ಸಿಜೆಐ