Friday, May 30, 2025
Homeರಾಜ್ಯಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್ ಪಡೆದಿದ್ದ ಸರ್ಕಾರಕ್ಕೆ ಶಾಕ್ ಕೊಟ್ಟ ಹೈಕೋರ್ಟ್

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್ ಪಡೆದಿದ್ದ ಸರ್ಕಾರಕ್ಕೆ ಶಾಕ್ ಕೊಟ್ಟ ಹೈಕೋರ್ಟ್

High Court shocks government over Hubballi riots case withdrawal

ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ದಾಖಲಾಗಿದ್ದ ಪ್ರಕರಣವನ್ನು ವಾಪಸ್ ಪಡೆದುಕೊಂಡಿದ್ದ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಹೈ ಕೋರ್ಟ್ ರದ್ದು ಪಡಿಸಿದ್ದು,ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಪ್ರಭಾವಿ ಸಂಸ್ಥೆಗಳಿಗೆ ಸೇರಿದ ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಿ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಅಕ್ಟೋಬರ್ 2024 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್ ) ಸಲ್ಲಿಸಿದ್ದರು.

ವಾದ – ಪ್ರತಿವಾದ ಆಲಿಸಿದ್ದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಸಚಿವ ಸಂಪುಟದ ತೀರ್ಮಾನವನ್ನು ರದ್ದು ಪಡಿಸಿ ಆದೇಶ ಪ್ರಕಟಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‍ನ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯ ಮೇಲೆ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದ 2022 ರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ಈ 43 ಪ್ರಕರಣಗಳಲ್ಲಿ ಕೆಲವು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967, ಸಾರ್ವಜನಿಕ ಆಸ್ತಿ ನಾಶ ತಡೆ ಕಾಯ್ದೆ, 1984 ಮತ್ತು ಧಾರ್ಮಿಕ ಸಂಸ್ಥೆ (ದುರುಪಯೋಗ ತಡೆ) ಕಾಯ್ದೆ, 1988ರ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ಟೋಬರ್ 15, 2024 ರ ಸರ್ಕಾರಿ ಆದೇಶವು ಕ್ರಿಮಿನಲ್ ಪ್ರೊಸೀಜರ್ ಕೋಡ್ ನ ಸೆಕ್ಷನ್ 321 ರ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿಬಂಧನೆಯು ನಿರ್ದಿಷ್ಟವಾಗಿ ಪ್ರಾಸಿಕ್ಯೂಟರ್‍ಗೆ ಮಾತ್ರ ಕಾನೂನು ಕ್ರಮದಿಂದ ಹಿಂದೆ ಸರಿಯಲು ಯಾವುದೇ ಕ್ರಮವನ್ನು ಪ್ರಾರಂಭಿಸುವ ಅಧಿಕಾರವನ್ನು ನೀಡುತ್ತದೆ.ಆದ್ದರಿಂದ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪ್ರಾಸಿಕ್ಯೂಟರ್‍ಗೆ ನಿರ್ದೇಶನ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇಲ್ಲ ಎಂದು ಅರ್ಜಿದಾರರ ಪರವಾಗಿ ವಾದಿಸಲಾಗಿತ್ತು.

ಅಲ್ಲದೆ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಯೋಗ್ಯವಲ್ಲ ಎಂದು ಹೇಳಿದ್ದ ಪೊಲೀಸ್ ಮತ್ತು ಪ್ರಾಸಿಕ್ಯೂಷನ್ ಇಲಾಖೆಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ, ಈ ಆದೇಶವನ್ನು ಆಧರಿಸಿದ ಸಚಿವ ಸಂಪುಟದ ನಿರ್ಧಾರವನ್ನು ಅರ್ಜಿದಾರರು ಉಲ್ಲೇಖ ಮಾಡಿದ್ದರು/
2020 ರಲ್ಲಿ ರಾಜ್ಯ ಸರ್ಕಾರವು ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಂಡ ಸಂದರ್ಭದಲ್ಲಿ, 2022 ರಲ್ಲಿ ಹೈಕೋರ್ಟ್, ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸುಪ್ರೀಂ ಕೋರ್ಟ್‍ನ ತೀರ್ಪಿನಿಂದ ನಿಯಂತ್ರಿಸಲ್ಪಡುತ್ತದೆ ಎಂದು ಸ್ಪಷ್ಟಪಡಿಸಿತ್ತು ಎಂದು ಅರ್ಜಿದಾರರು ಗಮನಸೆಳೆದಿದ್ದರು. . ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಆಯಾ ಹೈಕೋರ್ಟ್‍ಗಳ ಅನುಮತಿಯಿಲ್ಲದೆ ಹಿಂಪಡೆಯಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಏನಿದು ಪ್ರಕರಣ?
ಪ್ರಕರಣದಲ್ಲಿ ಒIಂ ಮುಖಂಡ ಆರಿಫ್ ಸೇರಿ ಹಲವು ಆರೋಪಿಗಳಾಗಿದ್ದು, ಹಳೇ ಹುಬ್ಬಳ್ಳಿ ಠಾಣೆಗೆ ನುಗ್ಗಿ ಆರೋಪಿಗಳು ಗಲಭೆ ಮಾಡಿದ್ದರು. ಆದರೆ ಈ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆದುಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನಗಳಿಗೆ ಹಾನಿ ಮಾಡಲಾಗಿತ್ತು. ಅಲ್ಲದೇ 4 ಜನ ಪೊಲೀಸರು ಗಾಯಗೊಂಡಿದ್ದರು.

2022 ಏಪ್ರಿಲ್ 16 ರಂದು ಗಲಭೆ ಪ್ರಕರಣ ನಡೆದಿತ್ತು. ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್? 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್? ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್? ಠಾಣೆ ಮುಂದೆ ಸೇರಿ ಗಲಾಟೆ ನಡೆಸಿದ್ದರು. ಈ ವೇಳೆ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ, ಮನೆಗಳ? ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಗಲಭೆ ಹಿನ್ನೆಲೆಯಲ್ಲಿ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿ, 158 ಮಂದಿಯನ್ನು ಅರೆಸ್ಟ್ ಮಾಡಿದ್ದರು. ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ಪರವಾಗಿ ಕಾನೂನು ಹೋರಾಟ ಮಾಡಲು ಸಾಮಾಜಿಕ ಸಂಘಟನೆ ಅಂಜುಮನ್-ಎ-ಇಸ್ಲಾಮಿ ನಿರ್ಧರಿಸಿತ್ತು. ಕಳೆದ ವರ್ಷ ಡಿಸೆಂಬರ್‍ನಲ್ಲಿ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ 35 ಆರೋಪಿಗಳಿಗೆ ಕೋರ್ಟ್? ಜಾಮೀನು ನೀಡಿತ್ತು. ಇದಕ್ಕೂ ಮುನ್ನ 11 ಆರೋಪಿಗಳಿಗೆ ಕೋರ್ಟ್‍ನಿಂದ ಜಾಮೀನು ಸಿಕ್ಕಿತ್ತು.

ಪ್ರಕರಣವನ್ನು ಕೈಬಿಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಎಐಎಂಐಎಂ ಮುಖಂಡ ಮೊಹಮ್ಮದ್ ಆರಿಫ್ ಮತ್ತು ಇತರರ ವಿರುದ್ಧ ಕೇಸ್ ದಾಖಲಾಗಿತ್ತು. ಆರಿಫ್ ಮತ್ತು ಇತರ 138 ಜನರ ವಿರುದ್ಧ ಕೊಲೆ ಯತ್ನ, ಗಲಭೆ ಮತ್ತು ಇತರ ಗಂಭೀರ ಆರೋಪಗಳಿದ್ದವು.

RELATED ARTICLES

Latest News