Thursday, September 19, 2024
Homeಅಂತಾರಾಷ್ಟ್ರೀಯ | Internationalಹಿಂದೂ ವಿರೋಧಿ ಹೋರಾಟವಾಗಿ ಪರಿವರ್ತನೆಗೊಂಡ ಬಾಂಗ್ಲಾ ಪ್ರತಿಭಟನೆ

ಹಿಂದೂ ವಿರೋಧಿ ಹೋರಾಟವಾಗಿ ಪರಿವರ್ತನೆಗೊಂಡ ಬಾಂಗ್ಲಾ ಪ್ರತಿಭಟನೆ

ಢಾಕಾ,ಆ.6- ಬಾಂಗ್ಲಾದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟ ಇದೀಗ ಹಿಂದೂ ವಿರೋಧಿ ಹೋರಾಟವಾಗಿ ಪರಿವರ್ತನೆಯಾಗಿದೆ. ಬಾಂಗ್ಲಾದಲ್ಲಿ ಹಿಂದೂ ಅವಾಮಿ ಲೀಗ್‌ನ ಹರದನ್‌ರಾಯ್‌ ಅವರನ್ನು ಹತ್ಯೆ ಮಾಡಿದ್ದ ಪ್ರತಿಭಟನಾಕಾರರ ಗುಂಪು ಇಂದು ಅವರ ಅಳಿಯನನ್ನು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ನೋಖಾಲಿ ಎಂಬಲ್ಲಿ ಹಿಂದೂಗಳ ಮನೆಗೆ ಉದ್ರಿಕ್ತರ ಗುಂಪು ನುಗ್ಗಿ ಹಲ್ಲೆ ನಡೆಸುತ್ತಿರುವ ವಿಡಿಯೋಗಳು ಭಾರಿ ವೈರಲ್‌ ಆಗುತ್ತಿವೆ. ಈ ಮಧ್ಯೆ ಹಿಂದೂ ಮಹಿಳೆಯೊಬ್ಬರು ಭಗವಂತ ಭಗವಂತ ಎಂದು ಕೂಗುತ್ತಿರುವ ದೃಶ್ಯ ಹಿಂದೂಗಳ ಕಣ್ಣಾಲಿಗಳಲ್ಲಿ ನೀರು ತರಿಸುತ್ತಿದೆ.

ಪ್ರತಿಮೆ ಧ್ವಂಸ: ಬಾಂಗ್ಲಾದಲ್ಲಿ ಪ್ರತಿಭಟನಾ ನಿರತ ಯುವಸಮೂಹ, ಬಾಂಗ್ಲಾದ ಸ್ಥಾಪಕ ಹಾಗೂ ಮಾಜಿ ಪ್ರಧಾನಿ ಶೇಖ್‌ ಹಸೀನಾರ ತಂದೆ, ಮಾಜಿ ಪ್ರಧಾನಿ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಪುತ್ಥಳಿಯನ್ನೂಧ್ವಂಸಗೊಳಿಸಿದ್ದಾರೆ.

ಪಾಕಿಸ್ತಾನದ ಪೂರ್ವಭಾಗವಾಗಿದ್ದ ಬಾಂಗ್ಲಾ ಸ್ವತಂತ್ರ ದೇಶವಾಗಬೇಕೆಂದು ರೆಹಮಾನ್‌ರ ಮುಂದಾಳತ್ವದಲ್ಲಿ ಅವಾಮಿ ಲೀಗ್‌ ಹೋರಾಟ ನಡೆಸಿತ್ತು. 1971ರಲ್ಲಿ ಬಾಂಗ್ಲಾದೇಶ ಅಸ್ತಿತ್ವಕ್ಕೆ ಬಂದಾಗ ಮೊದಲ ಪ್ರಧಾನಿಯಾದ ಇವರು, ಅಧ್ಯಕ್ಷೀಯ ಮಾದರಿಯ ಸರ್ಕಾರದ ಸಂವಿಧಾನವನ್ನು ಜಾರಿಗೆ ತಂದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ರೈಲು ಸಂಚಾರ ರದ್ದು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ತೀವ್ರಗೊಂಡಿರುವುದರಿಂದ ಕೋಲ್ಕತಾ ಹಾಗೂ ಢಾಕಾ ನಡುವೆ ಸಂಚರಿಸುತ್ತಿದ್ದ ಮೈತ್ರಿ ಎಕ್ಸ್ ಪ್ರೆಸ್‌‍ ರೈಲಿನ ಸೇವೆ ರದ್ದುಗೊಳಿಸಲಾಗಿದೆ. ಬಾಂಗ್ಲಾದಲ್ಲಿ ವಿದ್ಯಾರ್ಥಿ ಸಂಘರ್ಷ ಜೋರಾದ ಬೆನ್ನಲ್ಲೇ ಈ ರೈಲು ಜು.19ರಿಂದಲೇ ತನ್ನ ಸಂಚಾರವನ್ನು ನಿಲ್ಲಿಸಿತ್ತು. ಆ

ದರೆ ಬಾಂಗ್ಲಾದಲ್ಲಿನ ಅಧಿಕಾರಿಗಳ ಸೂಚನೆ ಮೇರೆಗೆ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ ಹೇಳಿದೆ. ಈ ರೈಲು ವಾರಕ್ಕೆ ಎರಡು ಬಾರಿ ಕೋಲ್ಕತಾದಿಂದ ಹೊರಟು ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ತಲುಪುತ್ತಿತ್ತು. 2008ರಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರು ರೈಲ್ವೆ ಸಚಿವರಾಗಿದ್ದಾಗ ಉದ್ಘಾಟಿಸಿದ್ದರು.

ಏರ್‌ಪೋರ್ಟ್‌ ಕಾರ್ಯಚರಣೆ ಬಂದ್‌; ಬಾಂಗ್ಲಾದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿರುವ ಢಾಕಾದ ಹಜ್ರೃತ್‌ ಶಾಹ್‌ಜಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಹಿಂಸಾಚಾರ ತೀವ್ರಗೊಂಡು ಪ್ರತಿಭಟನಾಕಾರರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ. ಹೀಗಾಗಿ ವಿಮಾನಗಳ ಹಾರಾಟಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ನಿಲ್ದಾಣದ ಕಾರ್ಯನಿರ್ವಹಕ ನಿರ್ದೇಶಕ ಕ್ಯಾಪ್ಟನ್‌ ಕಮ್ರುಲ್‌ ಇಸ್ಲಾಂ ಹೇಳಿದ್ದಾರೆ.

ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು; ಬಾಂಗ್ಲಾ ಹಿಂಸಾಚಾರ ಹಿನ್ನೆಲೆ ಏರ್‌ಇಂಡಿಯಾ ವಿಮಾನಯಾನ ಸಂಸ್ಥೆ ಸೋಮವಾರ ಢಾಕಾಗೆ ತನ್ನ ವಿಮಾನ ಹಾರಾಟವನ್ನು ರದ್ದುಗೊಳಿಸಿದೆ. ದೆಹಲಿಯಿಂದ ಢಾಕಾಗೆ ಪ್ರತಿದಿನ ಎರಡು ಏರ್‌ಇಂಡಿಯಾ ವಿಮಾನಗಳು ಹಾರಾಡುತ್ತಿದ್ದವು. ಬಾಂಗ್ಲಾದ ಉದ್ವಿಗ್ನ ಪರಿಸ್ಥಿತಿ ಕಾರಣ ಈ ಸೇವೆಯನ್ನು ರದ್ದುಗೊಳಿಸಿದೆ. ಇದೇ ವೇಳೆ ಇಂಡಿಗೋ ಕೂಡಾ ಢಾಕಾದ ತನ್ನ ವಿಮಾನಗಳ ಸಂಚಾರ ರದ್ದುಪಡಿಸಿದೆ.

RELATED ARTICLES

Latest News