Monday, May 6, 2024
Homeರಾಜ್ಯಬೆಳಗಾವಿ : ಹಿಂದೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮತಾಂತರಕ್ಕೆ ಯತ್ನಿಸಿದ್ದ ಆರೋಪಿಗಳ ಬಂಧನ

ಬೆಳಗಾವಿ : ಹಿಂದೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮತಾಂತರಕ್ಕೆ ಯತ್ನಿಸಿದ್ದ ಆರೋಪಿಗಳ ಬಂಧನ

ಬೆಳಗಾವಿ, ಏ. 22-ಹುಬ್ಬಳಿಯಲ್ಲಿ ನೇಹಾ ಭೀಕರ ಹತ್ಯೆ ಹಿಂದೆ ಲವ್ ಜಿಹಾದ್ ಮಾತುಗಳು ಕೇಳಿಬರುತ್ತಿರುವ ನಡುವೆ ಕೆಲಸ ಕೊಡಿಸುವುದಾಗಿ ಹೇಳಿ ಹಿಂದೂ ಮಹಿಳೆಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಸವದತ್ತಿ ಪೊಲೀಸರು ಬಂಧಿದ್ದಾರೆ.

ಮುನವಳ್ಳಿ ಪಟ್ಟಣದ ಆರೀಫ್ ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಪ್ರಕರಣ ದಾಖಲಾಗಿದ್ದು ,ಪ್ರಸ್ತುತ ಪ್ರಮುಖ ಆರೋಪಿ ಆರೀಫ್ ಮತ್ತು ಆತನ ಪತ್ನಿ ಬಂಸಲಾಗಿದೆ. ರಾಜ್ಯದಲ್ಲಿ ಲವ್ ಜಿಹಾದ್ನ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದ್ದು. ಹಿಂದೂ ಯುವತಿಯರಷ್ಟೇ ಅಲ್ಲದೆ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಿರುವ ಘಟನೆ ಇದಾಗಿದೆ.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದು ಆಕೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಸಂತ್ರಸ್ತ ಮಹಿಳೆ ಆಗಾಗ ಕಿರಾಣಿ ಅಂಗಡಿಯಲ್ಲಿ ಕೂತು, ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ ಆರೋಪಿ ಆರೀಫ್ ಬೇಪಾರಿ ನೆರೆ ಮನೆಯವರೆಂದು ಮಹಿಳೆಯನ್ನು ಪರಿಚಯ ಮಾಡಿಕೊಂಡು, ಅವರ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ.

ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬೆಳಗಾವಿ ಬಂದ ಬಳಿಕ ಆರೀಫ್ಗೆ ಮತ್ತೆ ಐವರು ದುಷ್ಕರ್ಮಿಗಳು ಸಾಥ್ ನೀಡಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ಮತ್ತು ಮಹಿಳೆಯ ಖಾಸಗಿ ಪೋಟೋಗಳನ್ನು ಸೆರೆಹಿಡಿದು, ಮತಾಂತರಗೊಳ್ಳುವಂತೆ ಬ್ಯ್ಲಾಕ್ಮೇಲ್ಮಾಡಿದ್ದಾರೆ.

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳು ಇಲ್ಲದಿದ್ದರೆ ಫೋಟೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿ ಹಣೆಗೆ ಕುಂಕುಮ ಅಳಿಸಿ ನಮಾಜ್ ಮಾಡಲು ಒತ್ತಡ ಹಾಕಿದ್ದಾರೆ.ಇದಲ್ಲದೆ ದುಷ್ಕರ್ಮಿಗಳು ಒತ್ತಾಯ ಪೂರ್ವಕವಾಗಿ ಬುರ್ಖಾ ಕೂಡ ಹಾಕಿಸಿದ್ದಾರೆ.

ದುರಳರ ಜಾಲದಿಂದ ತಪ್ಪಿಸಿಕೊಂಡ ಬಂದ ಸಂತ್ರಸ್ತ ಮಹಿಳೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನುಸೆರೆ ಹಿಡಿದಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Latest News