ನಿತ್ಯ ನೀತಿ : ನಿತ್ಯ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ , ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ. -ಸ್ವಾಮಿ ವಿವೇಕಾನಂದ
ಪಂಚಾಂಗ : ಮಂಗಳವಾರ, 09-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಆಶ್ಲೇಷಾ / ಯೋಗ:ಐಂದ್ರ / ಕರಣ: ಗರಜ
ಸೂರ್ಯೋದಯ – ಬೆ.06.31
ಸೂರ್ಯಾಸ್ತ – 5.54
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ.
ವೃಷಭ: ಸ್ವಲ್ಪ ಪ್ರಯತ್ನದಿಂದ ಅಥವಾ ಶ್ರಮವಿಲ್ಲದೆ ಹಣ ದೊರೆಯುವ ಸಾಧ್ಯತೆಗಳಿವೆ.
ಮಿಥುನ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿ ತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
ಕಟಕ: ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.
ಸಿಂಹ: ವೃತ್ತಿ ಜೀವನದಲ್ಲಿ ಶತ್ರುಗಳಿಂದ ದೂರವಿರಬೇಕಾಗುತ್ತದೆ.
ಕನ್ಯಾ: ಕೆಲಸದ ಹೊರೆ ಹೆಚ್ಚಿದ್ದರೆ, ಭಯಪಡುವ ಬದಲು ಕಷ್ಟಪಟ್ಟು ಕೆಲಸ ಮಾಡುವುದು ಸೂಕ್ತ.
ತುಲಾ: ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು.
ವೃಶ್ಚಿಕ: ಹಿಂದೆ ಹೂಡಿಕೆ ಮಾಡಿದ್ದ ಹಣದಿಂದ ಲಾಭ ಬರುವ ನಿರೀಕ್ಷೆಯಿದೆ.
ಧನುಸ್ಸು: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರ ಗಳಿಗೆ ಭಿನ್ನಾಭಿಪ್ರಾಯ ಎದುರಾಗಬಹುದು.
ಮಕರ: ಹಲವು ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ. ಸಾಲಗಾರರ ಒತ್ತಡ ಹೆಚ್ಚಾಗಲಿದೆ.
ಕುಂಭ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಬಹಳ ಒಳ್ಳೆಯದು.
ಮೀನ: ನಿಮ್ಮ ಶಕ್ತಿ-ಸಾಮರ್ಥ್ಯವನ್ನು ನೋಡಿ ಶತ್ರುಗಳು ದೂರ ಉಳಿಯುತ್ತಾರೆ.
