ನಿತ್ಯ ನೀತಿ : ಯಾವಾಗಲೂ ಏಕಾಂಗಿಯಾಗಿ ಬದುಕಲು ಸಿದ್ಧರಾಗಿರಿ, ಕೆಲವು ಜನರು ಇದ್ದಕ್ಕಿದ್ದಂತೆ ಬದಲಾಗುತ್ತಾರೆ. ಇಂದು ನೀವು ಅವರಿಗೆ ಮುಖ್ಯ. ನಾಳೆ ನೀವು ಅವರಿಗೆ ಏನೂ ಅಲ್ಲ ಮತ್ತು ಅದೇ ನಿಜ ಜೀವನ.
ಪಂಚಾಂಗ : ಶನಿವಾರ, 10-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ಸಪ್ತಮಿ / ನಕ್ಷತ್ರ: ಹಸ್ತ / ಯೋಗ: ಅತಿಗಂಡ / ಕರಣ: ಬಾಲವ
ಸೂರ್ಯೋದಯ – 06.45
ಸೂರ್ಯಾಸ್ತ – 6.09
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ತಳುಕಿನ ಮಾತಿಗೆ ಮರುಳಾಗದಿರಿ. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ.
ವೃಷಭ: ಮಕ್ಕಳಿಗೋಸ್ಕರ ಅಧಿಕ ಖರ್ಚು ಮಾಡುವಿರಿ. ಸಣ್ಣ ವಿಷಯಕ್ಕೆ ಕಲಹ.
ಮಿಥುನ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಕಟಕ: ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವಿರಿ. ಬಾಕಿ ವಸೂಲಿ ಮಾಡುವಿರಿ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಕುಂಭ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.
