Sunday, April 28, 2024
Homeರಾಜ್ಯವಿಮಾನ ನಿಲ್ದಾಣ ಮಾದರಿಯಲ್ಲಿ ವಿಶ್ವದರ್ಜೆಯ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿ : ಜೋಶಿ

ವಿಮಾನ ನಿಲ್ದಾಣ ಮಾದರಿಯಲ್ಲಿ ವಿಶ್ವದರ್ಜೆಯ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿ : ಜೋಶಿ

ಹುಬ್ಬಳ್ಳಿ, ಸೆ.24- ನಗರದ ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ರೈಲ್ವೆ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ 2.08 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಿದ ಎರಡು ಎಸ್ಕಲೇಟರ್‍ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಕೆಲವು ವರ್ಷಗಳ ಹಿಂದೆ ಇಲ್ಲಿ ಎರಡು ಪ್ಲಾಟ್ ಫಾರಂ ಇದ್ದವು. ಇಂದು 8 ಪ್ಲಾಟ್ ಫಾರಂಗಳನ್ನು ಕಲ್ಪಿಸಲಾಗಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ಪ್ರಯಾಣಿಕರಿಗೆ ಸಾಕಷ್ಟು ಸೌಲಭ್ಯಗಳು ಕಲ್ಪಿಸಿದಂತಾಗಿದೆ ಎಂದು ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಭೇಟೆ ಆರಂಭ, ಏರ್ ರೈಫಲ್ ಶೂಟಿಂಗ್‍ನಲ್ಲಿ ಬೆಳ್ಳಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ಪ್ರಭು ನವಲಗುಂದಮಠ, ರಂಗಾಬದ್ದಿ, ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸಂತೋಷ ಹೆಗಡೆ, ಹರಿತಾ ಎಸ್, ಇತರರು ಉಪಸ್ಥಿತರಿದ್ದರು.

RELATED ARTICLES

Latest News