ನವದೆಹಲಿ,ಮಾ.3- ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 628 ಭಾರತಿಯರನ್ನು ರಕ್ಷಣೆ ಮಾಡಿ ಕರೆತರಲಾಗಿದೆ.
ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ಸಿಲುಕಿ ಅಲ್ಲಿಂದ ತಪ್ಪಿಸಿಕೊಂಡು ರೊಮೆನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ರೊಮೆನಿಯಾದಿಂದ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದರು.
ಇನ್ನು ಹಂಗೇರಿಯಾದ ಬುಡಾಪೇಸ್ಟ್ನಿಂದ ಭಾರತೀಯ ವಾಯು ಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್ಭಟ್ ತಾಯ್ನಾಡಿಗೆ ಬಂದ ಭಾರತೀಯರನ್ನು ಸ್ವಾಗತಿಸಿ ಸುರಕ್ಷಿತವಾಗಿ ಅವರ ಸ್ಥಳಗಳಿಗೆ ತೆರಳುವ ವ್ಯವಸ್ಥೆ ಮಾಡಿವೆ.
ವಾಯು ಸೇನೆ ಸಿ-17 ಮೂರನೇ ವಿಮಾನ 208 ಭಾರತೀಯರನ್ನು ಪೋಲೆಂಡ್ನಿಂದ ಹೊರಟು ದೆಹಲಿ ಏರ್ಬೇಸ್ಗೆ ಬಂದಿದೆ. ಮೂರು ವಿಮಾನಗಳಲ್ಲಿ ಒಟ್ಟು 628 ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ.
