Friday, September 20, 2024
Homeರಾಜಕೀಯ | Politicsಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್

ಬೆಂಗಳೂರು,ಆ.3- ನೀವು ನಿಜವಾಗಿಯೂ ಸತ್ಯಹರಿಶ್ಚಂದ್ರರೇ ಆಗಿ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವುದಾದರೆ ಮೊದಲು ಮುಡಾ ಹಗರಣ ಪ್ರಕರಣದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರೇ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸವಾಲು ಹಾಕಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾಗಿದ್ದರೆ ರಾಜೀನಾಮೆ ನೀಡಲು ಮೀನಾಮೇಷ ಏಕೆ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯನವರು ಅಧಿಕಾರದಲ್ಲಿ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಲಜ್ಜೆಗೆಟ್ಟ ಸರ್ಕಾರ ಇನ್ನಷ್ಟು ಉಂಡು ತಿಂದು ನೀರು ಕುಡಿಯುವ ಮನಃಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು. ಭಸಾಸುರರಾಗಿ ಜನರ ತಲೆ ಮೇಲೆ ಕೈ ಇಟ್ಟಿದ್ದಾರೆ. ನಾನು ಸತ್ಯ ಹರಿಶ್ಚಂದ್ರ ಅನ್ನುತ್ತಾರೆ. ಇಂದು ಅವರ ಬಣ್ಣ ಬಯಲಾಗಿದೆ. ಆದರೂ ರಾಜೀನಾಮೆಗೆ ಮನಸ್ಸು ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇದು ಕೇವಲ ರಾಜ್ಯದ ಹಗರಣವಾಗಿ ಉಳಿದಿಲ್ಲ. ಸಿಎಂ ರಾಜ್ಯದ ಜನರ ಮನಸ್ಸಿನ ಭಾವನೆಗೆ ಗೌರವ ಕೊಟ್ಟು ರಾಜೀನಾಮೆ ಕೊಡಬೇಕು. ಇಲ್ಲವಾದರೆ ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದ ಅವರು, ಇನ್ನೆರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Latest News