Sunday, April 28, 2024
Homeರಾಷ್ಟ್ರೀಯಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು

ಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು

ಚೆನ್ನೈ,ನ.28- ಈ ವರ್ಷದ ಮಾರ್ಚ್ 31ರಂದು ನಡೆದ ಸಂಶೋಧನಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ಮದ್ರಾಸ್ ಪ್ರಾಧ್ಯಾಪಕರೊಬ್ಬರನ್ನು ಅಮಾನತುಗೊಳಿಸಿದೆ. ಗವರ್ನರ್ ಮಂಡಳಿಯ ನಿರ್ದೇಶನದ ಆಧಾರದ ಮೇಲೆ ಪ್ರೊಫೆಸರ್ ಆಶಿಶ್ ಸೇನ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂಸ್ಥೆಯು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುತ್ತಿದೆ ಎಂದು ಐಐಟಿ ಮದ್ರಾಸ್‍ನ ಹೇಳಿಕೆ ತಿಳಿಸಿದೆ.

ಪಶ್ಚಿಮ ಬಂಗಾಳದ 32 ವರ್ಷದ ಡಾಕ್ಟರೇಟ್ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಸಂಸ್ಥೆಯಲ್ಲಿ ನಡೆದ ಮೂರನೇ ಘಟನೆಯಾಗಿದೆ. ಸಚಿನ್ ಎಂದು ಗುರುತಿಸಲಾದ ವಿದ್ಯಾರ್ಥಿ ಪಿಎಚ್‍ಡಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 31 ರಂದು ಕ್ಯಾಂಪಸ್‍ನ ಹೊರಗಿನ ಹಾಸ್ಟೆಲ್ ಕೋಣೆಯಲ್ಲಿ ಸಚಿನ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಗಂಟೆಗಳ ಮೊದಲು, ಅವರು ಕ್ಷಮಿಸಿ, ನಾನು ಸಾಕಷ್ಟು ಒಳ್ಳೆಯವನಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಅನ್ನು ಪೋಸ್ಟ್ ಮಾಡಿದ್ದರು.

ಲಾಂಗ್‍ನಿಂದ ಬೆದರಿಸಿ ಸುಲಿಗೆ ಮಾಡಿದ್ದ ನಾಲ್ವರು ಖಾಕಿ ಬಲೆಗೆ

ಸಚಿನ್ ಅವರ ಕುಟುಂಬದವರು ತಮ್ಮ ವಿವರವಾದ ದೂರಿನಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಸೇನ್ ಮತ್ತು ಇತರರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇತ್ತೀಚೆಗೆ, ಭಾರತದ ಉನ್ನತ ಶ್ರೇಣಿಯ ಎಂಜಿನಿಯರಿಂಗ್ ಸಂಸ್ಥೆಯು ನಿವೃತ್ತ ಐಪಿಎಸ್ ಅಧಿಕಾರಿ ಜಿ ತಿಲಗಾವತಿ ಅವರನ್ನು ವಿಚಾರಣಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಪ್ರೊಫೆಸರ್ ಸೇನ್ ವಿರುದ್ಧದ ಕ್ರಮವನ್ನು ವಿದ್ಯಾರ್ಥಿ ಸಂಘವು ಸ್ವಾಗತಿಸಿದೆ.

RELATED ARTICLES

Latest News