Saturday, April 27, 2024
Homeರಾಷ್ಟ್ರೀಯಹಿಂದೂ ಮಹಾಸಾಗರದ ಭದ್ರತೆಗೆ ಭಾರತ ಬದ್ಧ ; ಪ್ರಧಾನಿ ಮೋದಿ

ಹಿಂದೂ ಮಹಾಸಾಗರದ ಭದ್ರತೆಗೆ ಭಾರತ ಬದ್ಧ ; ಪ್ರಧಾನಿ ಮೋದಿ

ನವದೆಹಲಿ, ಮಾ.19 (ಪಿಟಿಐ) : ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಭಾರತೀಯ ನೌಕಾಪಡೆಯು ತನ್ನ ದೇಶದ ಹಡಗು ಮತ್ತು ಸಿಬ್ಬಂದಿಯನ್ನು ರಕ್ಷಿಸಿದ್ದಕ್ಕಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಅವರು ಮೋದಿಗೆ ಧನ್ಯವಾದ ಸಲ್ಲಿಸಿದ ನಂತರ ಮಾತನಾಡಿದ ಪ್ರಧಾನಿಗಳು ಈ ಭರವಸೆ ನೀಡಿದ್ದಾರೆ.

ಏಳು ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ರುಯೆನ್ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕೆಚ್ಚೆದೆಯ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ಎಂದು ರಾದೇವ್ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ.ತಮ್ಮ ಉತ್ತರದಲ್ಲಿ ಮೋದಿ ಈ ಸಂದೇಶವನ್ನು ನಾನು ಪ್ರಶಂಸಿಸುತ್ತೇನೆ ಎಂದು ಹೇಳಿದರು.

ಏಳು ಬಲ್ಗೇರಿಯನ್ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಿದ್ದಾರೆ ಎಂದು ನಮಗೆ ಸಂತೋಷವಾಗಿದೆ. ನೌಕಾಯಾನ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತ ಬದ್ಧವಾಗಿದೆ ಎಂದು ಅವರು ಹೇಳಿದರು.

RELATED ARTICLES

Latest News