ಟೆಹ್ರಾನ್, ಜೂ.13 (ಪಿಟಿಐ) ಇಸ್ರೇಲ್ ದೇಶದ ಮೇಲೆ ದಾಳಿ ನಡೆಸಿದ ನಂತರ, ಇರಾನ್ನಲ್ಲಿರುವ ಭಾರತೀಯರು ಜಾಗರೂಕರಾಗಿರಿ, ಅನಗತ್ಯ ಚಲನವಲನಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಶಿಷ್ಟಾಚಾರಗಳನ್ನು ಪಾಲಿಸುವಂತೆ ಇಲ್ಲಿನ ರಾಯಭಾರ ಕಚೇರಿ ಸೂಚಿಸಿದೆ. ಇರಾನ್ನ ಪರಮಾಣು ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಇಸ್ರೇಲ್ ದಾಳಿ ನಡೆಸಿತು. ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್್ಸನಲ್ಲಿ ಪೋಸ್ಟ್ ಮಾಡಿದ ಸಲಹೆಯಲ್ಲಿ, ಇರಾನ್ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಿ, ಎಲ್ಲಾ ಅನಗತ್ಯ ಚಲನವಲನಗಳನ್ನು ತಪ್ಪಿಸಿ ಎಂದು ಮನವಿ ಮಾಡಿಕೊಂಡಿದೆ.
ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅನುಸರಿಸಿ ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಶಿಷ್ಟಾಚಾರಗಳನ್ನು ಪಾಲಿಸಿ ಎಂದು ಹೇಳಿದೆ. ಇರಾನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ವಿಫಲಗೊಳಿಸುವ ಗುರಿಯನ್ನು ಹೊಂದಿರುವ ಆಪರೇಷನ್ ರೈಸಿಂಗ್ ಲಯನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಘೋಷಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ತಮ್ಮ ದೇಶವು ನಟಾಂಜ್ನಲ್ಲಿರುವ ಅದರ ಮುಖ್ಯ ಪುಷ್ಟೀಕರಣ ಸೌಲಭ್ಯ ಸೇರಿದಂತೆ ಇಸ್ಲಾಮಿಕ್ ಆಡಳಿತದ ಪರಮಾಣು ಕಾರ್ಯಕ್ರಮದ ಹೃದಯಭಾಗದ ಮೇಲೆ ದಾಳಿ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.