ನವದೆಹಲಿ,ಫೆ.20- ಕೊರೊನಾ ಸೋಂಕಿನ ಆತಂಕ ದೂರವಾಗುತ್ತಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19,968 ಹೊಸ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿನಿಂದ 48,847 ಮಂದಿ ಚೇತರಿಸಿಕೊಂಡಿದ್ದಾರೆ. 673 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಸದ್ಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,24,387ರಷ್ಟಿದ್ದು, ದೈನಂದಿನ ಪಾಸಿವಿಟಿ ದರ 1.68ರಷ್ಟಿದೆ. ಈವರೆಗೆ ಕೋವಿಡ್ನಿಂದ 4,20,86, 383 ಮಂದಿ ಗುಣಮುಖರಾಗಿದ್ದು, ನಿನ್ನೆ 623 ಜನ ಸಾವನ್ನಪ್ಪಿರುವುದು ಸೇರಿದಂತೆ ಒಟ್ಟಾರೆ ಈವರೆಗೆ 5,19,903 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಕೋವಿಡ್ ಚೇತರಿಕೆ ದರ ಶೇ.98.21 ಆಗಿದೆ.
ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ನಿನ್ನೆ 1137 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕು ಕಾಣಿಸಿಕೊಂಡಿದೆ. 20 ಮಂದಿ ಸಾವನ್ನಪ್ಪಿದ್ದು, 3870 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,431ಕ್ಕೆ ಏರಿಕೆಯಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ಕೋವಿಡ್ ಲಸಿಕೆ ನೀಡುತ್ತಿದ್ದು, ಲಸಿಕೆ ನೀಡಿಕೆ ಪ್ರಮಾಣ 175 ಕೋಟಿ ದಾಟಿದೆ. ಬಹುತೇಕ ರಾಜ್ಯಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕೋವಿಡ್ ಹರಡುವಿಕೆ ತಡೆಗೆ ಹೇರಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.
ಕೋವಿಡ್ ನಮ್ಮಿಂದ ಪೂರ್ಣವಾಗಿ ದೂರವಾಗಿಲ್ಲ. ಮಾಸ್ಕ್ ಧರಿಸುವುದು, ಕೋವಿಡ್ ಮಾರ್ಗಸೂಚಿ ಪಾಲನೆಯನ್ನು ಜನ ಕಟ್ಟುನಿಟ್ಟಾಗಿ ಪಾಲಿಸಬೇಕು.
