Sunday, September 8, 2024
Homeರಾಷ್ಟ್ರೀಯ | Nationalಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ನಿಗ್ರಹ ಖಚಿತ; ದ್ವಿವೇದಿ

ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ನಿಗ್ರಹ ಖಚಿತ; ದ್ವಿವೇದಿ

ಜಮ್ಮು, ಜು 20 (ಪಿಟಿಐ) ಜಮ್ಮು ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಿಭಾಯಿಸಲು ಮತ್ತು ಶಾಂತಿಯನ್ನು ಕಾಪಾಡಲು ಶಸ್ತ್ರಸ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳು ವಿವಿಧ ಕಾರ್ಯ ವಿಧಾನ ದೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.

ರಾಜಭವನ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿBSF, CRPF, ಕಾಶ್ಮೀರ ಪೊಲೀಸ್ ಮಹಾನಿರ್ದೇಶಕರು, ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರು ಮತ್ತು ಇತರ ಹಿರಿಯ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಭರವಸೆ ನೀಡಿದ್ದಾರೆ.

ಲೆಫ್ಟಿನೆಂಟ್ ಗಮರ್ನರ್ ಮನೋಜ್ ಸಿನ್ಹಾ ಅವರು ಸೇನಾ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು, ವಿವಿಧ ಭದ್ರತಾ ಮತ್ತು ಕಾನೂನು ಜಾರಿ ಏಜೆನ್ಸಿಗಳ ಮುಖ್ಯಸ್ಥರು ಮತ್ತು ಜಮ್ಮು ವಿಭಾಗದಲ್ಲಿ ಸಂಘಟಿತ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಸಕ್ರಿಯವಾಗಿ ನಡೆಸಲು ಅವರನ್ನು ಕೇಳಿಕೊಂಡರು. ಭಯೋತ್ಪಾದಕರು ಮತ್ತು ಅವರಿಗೆ ಸಹಾಯ ಮಾಡುವವರನ್ನು ನಾಶಮಾಡಲು ಎಲ್ಲಾ ಏಜೆನ್ಸಿಗಳ ನಡುವೆ ಹೆಚ್ಚಿನ ಸಿನರ್ಜಿಯೊಂದಿಗೆ ನಾವು ನಿಖರವಾದ ಮತ್ತು ಉತ್ತಮವಾಗಿ ಯೋಜಿತ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪ್ರಾರಂಭಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಶೂನ್ಯ ಗಡಿ ನುಸುಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಗ್ರಿಡ್ ಅನ್ನು ಇನ್ನಷ್ಟು ಬಲಪಡಿಸಬೇಕು ಎಂದು ಸಿನ್ಹಾ ನಿರ್ದೇಶಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಜೂನ್ 30 ರಂದು ಭಾರತೀಯ ಸೇನೆಯ 30 ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ ಮೂರು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ಬಾರಿಗೆ ಜಮ್ಮುವಿಗೆ ಸೇನಾ ಮುಖ್ಯಸ್ಥರ ಭೇಟಿಯು ಮಹತ್ವ ಪಡೆದುಕೊಂಡಿದೆ. ಜಮ್ಮುವಿನಲ್ಲಿ ಸೇನಾ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಮತ್ತು ಗೃಹ ಸಚಿವಾಲಯದ ಹಿರಿಯ ಅ„ಕಾರಿಗಳು ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಡೈರೆಕ್ಟರೇಟ್ ಜನರಲ್ ಅವರು ಜಮ್ಮುವಿನಲ್ಲಿ ನಡೆದ ಜಂಟಿ ಭದ್ರತಾ ಪರಿಶೀಲನಾ ಸಭೆ ಈ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ರಾಷ್ಟ್ರ ವಿರೋಧಿ ಅಂಶಗಳ ದುರುದ್ದೇಶಪೂರಿತ ವಿನ್ಯಾಸವನ್ನು ತಡೆಯಲು ಕೇಂದ್ರೀಕರಿಸಿದೆ ಎಂದು ಎಕ್ಸ್ ಮಾಡಿದ್ದಾರೆ.
ಪ್ರಸ್ತುತ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಶಸ್ತ್ರಸ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳ ಸಿನರ್ಜಿಟಿಕ್ ವಿಧಾನದ ಕುರಿತು ಸೇನಾ ಮುಖ್ಯಸ್ಥರು ಗವರ್ನರ್ ವಿವರಿಸಿದರು ಎಂದು ತಿಳಿದುಬಂದಿದೆ.

RELATED ARTICLES

Latest News