ನವದೆಹಲಿ,ಡಿ.30-ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ಮನ್-ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಕಾರು ಅಪಘಾತದಲ್ಲಿ ಗಂಭೀರÀವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ದಿಲ್ಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಭವಿಸಿದೆ.
ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಪರಿಸ್ಥತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ,ರಿಷಭ್ ಪಂತ್ ಅವರು ದಿಲ್ಲಿಯಿಂದ ಉತ್ತರಾಖಂಡದ ತಮ್ಮ ಮರ್ಸಿಡಿಸ್ ಕಾರು ಚಲಾಯಿಸಿಕೊಮಡು ಮನೆಗೆ ಮರಳುತ್ತಿದ್ದ ವೇಳೆ ಹಮ್ಮಾದ್ಪುರ್ ಝಾಲ್ ಸಮೀಪ ಮುಂಜಾನೆ 5.30ರ ಸಮದರ್ಭದಲ್ಲಿ ಈ ದುರ್ಘಟನೆ ನಡೆದಿದೆ .
ಕಾರು ವೇಗದಲ್ಲಿತ್ತು ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.ಅಪಘಾತ ಸಂಭವಿಸಿದ ಸಂದರ್ಭದಲ್ಲಿ ರಿಷಭ್ ಪಂತ್ ಅವರು ಒಬ್ಬರೇ ಕಾರಿನಲ್ಲಿದ್ದರು ಎಂದು ಉತ್ತರಾಖಂಡ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಕುರ್ಮಾ ತಿಳಿಸಿದ್ದಾರೆ.
ಕಾರಿಗೆ ಬೆಂಕಿ ಹೊತ್ತಿಕೊಂಡ ನಂತರ ಪಂತ್ ಅವರು ಕಾರಿನ ಗಾಜನ್ನು ಒಡೆದು ಹೊರಗಡೆ ಬಂದಿದ್ದಾರೆ. ಅಪಘಾತದಲ್ಲಿ ಪಂತ್ ಅವರ ತಲೆ, ಮೊಣಕಾಲು ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ರಿಷಭ್ ಪಂತ್ ಅವರ ಕಾರು ಜಖಂಗೊಂಡಿದೆ,ಘಟನೆ ಬಗ್ಗೆ ಬಿಸಿಸಿಐ ಆತಂಕ ವ್ಯಕ್ತಪಡಿಸಿದ್ದಾರೆ.
#TeamIndia, #wicketkeeper, #RishabhPant, #injured, #CarAccident, #CarCrash,