ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ
ಬೆಂಗಳೂರು, ಆ.12-ಪ್ರತಿ ಗ್ರಾಮದಲ್ಲೂ ಸ್ಮಶಾನಗಳಿಗೆ ಜಾಗ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಪ್ರತಿ ಗ್ರಾಮದಲ್ಲೂ ಸಶಾನಗಳು ಇರುವ ಹಾಗೂ ಇಲ್ಲದಿರುವ ಬಗ್ಗೆ ಸರ್ವೆ ನಡೆಸಬೇಕು. ಸಶಾನಗಳು ಇಲ್ಲದಿರುವ ಗ್ರಾಮಗಳನ್ನು ಗುರುತಿಸಿ ಸಶಾನಕ್ಕೆ ಬೇಕಾದ ಸ್ಥಳಾವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ. ಅದೇ ರೀತಿ ಕೆರೆಗಳ ಒತ್ತುವರಿ ಬಗ್ಗೆಯೂ ಸರ್ವೆ ನಡೆಸಬೇಕು. ಕೆರೆಯ ಅಂಗಳ ಒತ್ತುವರಿಯಾಗಿರುವುದನ್ನು ಗುರುತಿಸಿ ತಕ್ಷಣವೇ ಒತ್ತುವರಿ ತೆರವಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. ಸಭೆಯಲ್ಲಿ ಆಯಾ ಜಿಲ್ಲಾ ಮತ್ತು ತಾಲ್ಲೂಕಿಗೆ ಸಂಬಂಧಿಸಿದಂತೆ ಸಶಾನಗಳ ಹಾಗೂ ಕೆರೆ ಒತ್ತುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಮೇಲಿನಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬಹಳ ವರ್ಷಗಳಿಂದ ರೈತರು ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ಬಗರ್ ಹುಕುಂನಡಿ ಸಲ್ಲಿಸಿರುವ ಅರ್ಜಿಗಳನ್ನು ಇತ್ಯರ್ಥಪಡಿಸಿ. ಅರ್ಹರಿಗೆ ಬಗರ್ … Continue reading ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed