ಬೆಂಗಳೂರು, ಜು.2- ಹಾಸನದಲ್ಲಿ ಹಲವಾರು ಮಂದಿ ಹೃದಯಘಾತದಿಂದ ಮೃತಪಟ್ಟಿರುವುದಕ್ಕೆ ಅತಿಯಾದ ತೂಕ ಹಾಗೂ ರೆಡ್ ಮೀಟ್ ಸೇವನೆ ಕಾರಣ ಇರಬಹುದು ಎಂದು ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸಂಭವಿಸಿದ ಸಾಲು ಸಾಲು ಸಾವುಗಳಿಗೆ ಕಾರಣ ಪತ್ತೆ ಹಚ್ಚಲು ಸರ್ಕಾರ ನೇಮಿಸಿರುವ ತಾಂತ್ರಿಕ ಸಮಿತಿಯ ಸದಸ್ಯರು ಇಂತಹ ಅನುಮಾನ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ಸಮಿತಿಯ ತಪಾಸಣೆ ವೇಳೆ ಇಂತಹ ಶಾಕಿಂಗ್ ವಿಚಾರ ಬಯಲಾಗಿದ್ದು, ಮೇಲ್ನೋಟಕ್ಕೆ ಹಾಸನದ ಪ್ರಕರಣಗಳಿಗೆ ಇದೇ ಮುಖ್ಯ ಕಾರಣ ಎನ್ನಲಾಗಿದೆ. ಅತಿಯಾದ ತೂಕ, ರೆಡ್ ಮೀಟ್ ಸೇವನೆಯಿಂದ ಸಾವು ಸಂಭವಿಸ್ತಾ ಈ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಲಾಗುತ್ತಿದೆ ಎಂದು ಜಯದೇವ ಆಸ್ಪತ್ರೆಯ ಮುಖ್ಯಸ್ಥರಾಗಿರುವ ಡಾ. ರವೀಂದ್ರ ಅವರು ತಿಳಿಸಿದ್ದಾರೆ.
ಅತಿಯಾದ ಬೊಜ್ಜು, ಮಾಂಸ ಸೇವನೆ ಹಾಗೂ ಮದ್ಯಪಾನದಿಂದ ಸಾವು ಸಂಭಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ರೆಡ್ ಮೀಟ್ ಸೇವನೆಯಿಂದ ಕೊಲೆಸ್ಟ್ರಾಲ್ ಬಂದು ಅದು ಅನ್ ಕಂಟ್ರೋಲ್ಡ್ ಕೊಲೆಸ್ಟ್ರಾಲ್ ಕಾರಣವಾಗಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ