Sunday, May 5, 2024
Homeಇದೀಗ ಬಂದ ಸುದ್ದಿಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?

ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?

ಬೆಂಗಳೂರು,ಡಿ.6- ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರನ್ನು ಹಣಕಾಸು ವಿಚಾರಕ್ಕೆ ಅಪಹರಿಸಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

6 ತಂಡ ರಚನೆ:
ಮಹದೇವಯ್ಯಅವರನ್ನು ಅವರದ್ದೇ ಕಾರಿನಲ್ಲಿ ಅಪಹರಿಸಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಚನ್ನಪಟ್ಟಣ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ವಿವಿಧ ದೃಷ್ಟಿಕೋನಗಳಲ್ಲಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿವೆ.

ಪರಿಚಯಸ್ಥರೇ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಒಂದು ತಂಡ ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದೆ.ಮಹದೇವಯ್ಯ ಅವರು ಕಾಣೆಯಾಗಿದ್ದ ತೋಟದ ಮನೆಯನ್ನು ಇಂಚಿಂಚೂ ಬಿಡದೆ ಪರಿಶೀಲನೆ ನಡೆಸಿರುವ ಪೊಲೀಸರು ಹಲವು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ.

ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ

ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ರಾಮಪುರ ಬಳಿ ಪತ್ತೆಯಾಗುತ್ತಿದ್ದಂತೆ ಪೊಲೀಸರು, ಬೆರಳಚ್ಚು ತಜ್ಞರು ಅಲ್ಲಿಗೆ ತೆರಳಿ ಕಾರನ್ನೂ ಸಹ ಕೂಲಂಕುಶವಾಗಿ ತಪಾಸಣೆ ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಮೃತದೇಹ ಪತ್ತೆಯಾದ ಸ್ಥಳಕ್ಕೆ ಭೇಟಿ:
ಮಹದೇವಯ್ಯ ಅವರ ಮೃತದೇಹ ಪತ್ತೆಯಾದ ಸ್ಥಳಕ್ಕೆ ಒಂದು ತಂಡ ಭೇಟಿ ನೀಡಿ ಟೆಕ್ನಿಕಲ್ ಆಧಾರದ ಮೂಲಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಒಟ್ಟಾರೆ ಮಹದೇವಯ್ಯ ಅವರ ಅಪಹರಣ ಹಾಗೂ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹಗಲಿರುಳು ರಾಮನಗರ ಜಿಲ್ಲಾ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು , ಶೀಘ್ರದಲ್ಲೇ ಬಂಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News