ಬೆಂಗಳೂರು,ಸೆ.18- ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬೆಂಗಳೂರಿನ ಹೆಸರಿಗೆ ಕಳಂಕ ತರುವ ಕೆಲಸ ಮಾಡಬೇಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಡಿಸಿಎಂ ಹಾಗೂ ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ .ಶಿವಕುಮಾರ್ಗೆ ಚಾಟಿ ಬೀಸಿದ್ದಾರೆ.
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಉದ್ಯಮಿಗಳಿಗೆ, ಹೂಡಿಕೆದಾರರಿಗೆ ನೆಚ್ಚಿನ ತಾಣವಾಗಿದ್ದ ಬೆಂಗಳೂರು ನಗರ, ಇವತ್ತು ನಿಮ ದುರಾಡಳಿತದಿಂದ, ನಿರ್ಲಕ್ಷ್ಯದಿಂದ ಐಟಿಬಿಟಿ ಕಂಪನಿಗಳು, ಕೈಗಾರಿಕೆಗಳು ಬೇರೆ ರಾಜ್ಯಗಳಿಗೆ ಹೋಗುವ ಆಲೋಚನೆ ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರು ಕಟ್ಟಿದ ಊರಿಗೆ ಕಳಂಕ ತರುವ ಪಾಪದ ಕೆಲಸ ಮಾಡಿದರೆ ಇತಿಹಾಸದಲ್ಲಿ ಕನ್ನಡಿಗರು ಎಂದಿಗೂ ಕ್ಷಮಿಸದ ಖಳನಾಯಕನಾಗುತ್ತೀರಿ ಎಂದು ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ.