Saturday, May 18, 2024
Homeಅಂತಾರಾಷ್ಟ್ರೀಯಪಾಕಿಸ್ತಾನದಲ್ಲಿ ಮತ್ತೊಬ್ಬ ಮಸೂದ್ ಆಪ್ತನನ್ನು ಹೊಸಕಿಹಾಕಿದ 'ಪರಿಚಿತ ವ್ಯಕ್ತಿ'

ಪಾಕಿಸ್ತಾನದಲ್ಲಿ ಮತ್ತೊಬ್ಬ ಮಸೂದ್ ಆಪ್ತನನ್ನು ಹೊಸಕಿಹಾಕಿದ ‘ಪರಿಚಿತ ವ್ಯಕ್ತಿ’

ಇಸ್ಲಾಮಾಬಾದ್,ನ.13- ಪಾಕಿಸ್ತಾನದ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂಖಾನ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದ ಕೆಲವು ದಿನಗಳಲ್ಲಿಯೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನಾ ಮಸೂದ್ ಅಜರ್‍ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್‍ನನ್ನು ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಶದಲ್ಲಿ ಭಾಗವಹಿಸಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಈತನ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೈದಿದ್ದಾರೆ.

ತಾರೀಖ್ ಪಾಕಿಸ್ತಾನದಲ್ಲಿ ಖ್ಯಾತ ಮೌಲಾನಾನಾಗಿದ್ದು, ಆತನ ಭಾಷಣ ಗಳನ್ನು ಕೇಳಲು ಸಾವಿರಾರು ಜನರು ಸೇರುತ್ತಾರೆ. ಧಾರ್ಮಿಕ ಸಮಾವೇಶಗಳಲ್ಲಿ ಆತ ಭಾರತ ವಿರೋಧಿ ಭಾಷಣಗಳನ್ನು ಮಾಡುತ್ತಿದ್ದ.

ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿ ರುವ ಉಗ್ರರ ದಾಳಿಗಳಿಗಾಗಿ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸಿ, ನೇಮಕ ಮಾಡಿಕೊಳ್ಳುವ ಹೊಣೆ ಗಾರಿಕೆಯನ್ನು ನಿಭಾಯಿಸಿಸುತ್ತಿದ್ದ ಅಕ್ರಂಖಾನ್ ಘಾಜಿಯನ್ನು ಪಾಕಿಸ್ತಾನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯಲ್ಲಿ ಬೈಕ್‍ನಲ್ಲಿ ಬಂದ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಜೈಶ್ ಎ ಮೊಹಮ್ಮದ್ ಸಂಘಟನೆಯ ಮಸೂದ್ ಅಜರ್‍ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ದೇವೇಗೌಡರು, ಎಸ್.ಎಂ.ಕೃಷ್ಣ ಹಾಗೂ ಬೊಮ್ಮಾಯಿ ಭೇಟಿ ಮಾಡಿದ ವಿಜಯೇಂದ್ರ

ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಕೆಲವು ಪ್ರಮುಖ ವ್ಯಕ್ತಿಗಳ ಹತ್ಯೆಗಳು ನಡೆಯುತ್ತಿವೆ. ಇವರೆಲ್ಲರೂ ಉಗ್ರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಭಾರತ ವಿರೋ ಕೃತ್ಯಗಳಲ್ಲಿ ಭಾಗಿಯಾಗಿದ್ದವರೇ ಆಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸುಂಜುವಾನ್‍ನ ಭಾರತೀಯ ಸೇನಾ ಶಿಬಿರದ ಮೇಲೆ 2018ರಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಯ ಪ್ರಮುಖ ಸಂಚುಕೋರ ಖವಾಜಾ ಶಾಹಿದ್ ಅಲಿಯಾಸ್ ಮಿಯಾ ಮುಜಾಹಿದ್‍ನನ್ನು ಅಪಹರಿಸಿ ಶಿರಚ್ಛೇದ ಮಾಡಲಾಗಿತ್ತು. ಇದೇ ರೀತಿ ಧಾಂಗ್ರಿ ಪ್ರದೇಶದ ಉಗ್ರ ದಾಳಿಯ ಮಾಸ್ಟರ್‍ಮೈಂಡ್ ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಂನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಸೀದಿ ಯೊಂದರ ಒಳಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ರಾವಲ್ಪಿಂಡಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಅಲಂನನ್ನು ಹತ್ಯೆ ಮಾಡಲಾಗಿತ್ತು.

ಈ ಹತ್ಯೆಗಳ ಹಿನ್ನೆಲೆ ಇಂದಿಗೂ ನಿಗೂಢ ವಾಗಿ ಉಳಿದಿದೆ. ಯಾವ ಸಂಘಟನೆಯೂ ಇವುಗಳಿಗೆ ಹೊಣೆ ಹೊತ್ತುಕೊಂಡಿಲ್ಲ.

RELATED ARTICLES

Latest News