ವಿಶ್ವಸಂಸ್ಥೆಯಲ್ಲಿ “ಪಾಪಿ”ಸ್ತಾನಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಜೈಶಂಕರ್

ವಿಶ್ವಸಂಸ್ಥೆ, ಸೆ.29– ಗಡಿಯಾಚೆಗಿನ ಭಯೋತ್ಪಾದನೆಗೆ ತಕ್ಕ ಪ್ರತೀಕಾರ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಇತರ ದೇಶಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿದ ಪರಿಣಾಮ ಪಾಕಿಸ್ತಾನ ಈಗ ಕರ್ಮ ಎದುರಿಸುತ್ತಿದೆ ಎಂದು ಟೀಕಿಸಿದರು. ಭಾರತದ ನಿಲುವನ್ನು ನಾನು ಸ್ಪಷ್ಟಪಡಿಸುತ್ತೇನೆ. ಪಾಕ್ನ ಗಡಿಯಾಚೆಗಿನ ಭಯೋತ್ಪಾದನಾ ನೀತಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಅದಕ್ಕೆ ಖಂಡಿತಾಗಿಯೂ ತಕ್ಕ ಶಾಸ್ತಿ ಆಗಲಿದೆ ಎಂದು ಜೈಶಂಕರ್ ಎಚ್ಚರಿಕೆ ಕೊಟ್ಟರು. … Continue reading ವಿಶ್ವಸಂಸ್ಥೆಯಲ್ಲಿ “ಪಾಪಿ”ಸ್ತಾನಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಜೈಶಂಕರ್