ಮೈಸೂರು,ಆ.14- ನಗರದ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೋರೋನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅರಮನೆ ಆವರಣದಲ್ಲಿಯೇ ಆನೆಗಳ ತಾಲೀಮು ನಡೆಸಲಾಗಿತ್ತು. ಈ ಬಾರಿ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ. ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭವಾಗಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ ,ಸಯ್ಯಾಜಿರಾವ್ ರಸ್ತೆ,ಆಯುರ್ವೇದಿಕ್ ಸರ್ಕಲ್, ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.
ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳಿಗೆ ತೂಕ ಮಾಡಿಸಲಾಗಿದೆ. ಎಲ್ಲ ಆನೆಗಳು ಅರೋಗ್ಯವಾಗಿವೆ. ವಿಶೇಷವೆನೆಂದರೇ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿವೆ. ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತದೆ.