Friday, October 18, 2024
Homeರಾಷ್ಟ್ರೀಯ | Nationalಜಮ್ಮು ಕಾಶ್ಮೀರ ರಾಜ್ಯ ಸ್ಥಾನಮಾನಕ್ಕೆ ಸಂಪುಟ ನಿರ್ಣಯ

ಜಮ್ಮು ಕಾಶ್ಮೀರ ರಾಜ್ಯ ಸ್ಥಾನಮಾನಕ್ಕೆ ಸಂಪುಟ ನಿರ್ಣಯ

Jammu Kashmir Statehood

ಶ್ರೀನಗರ,ಅ.18- ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ನೇತತ್ವದ ಜಮ್ಮು ಮತ್ತು ಕಾಶ್ಮೀರ ಸಚಿವ ಸಂಪುಟ ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ನಿರ್ಣಯವನ್ನು ಅಂಗೀಕರಿಸಿದೆ. ನಿನ್ನೆ ನಡೆದ ತನ್ನ ಮೊದಲ ಸಭೆಯಲ್ಲಿ ಕ್ಯಾಬಿನೆಟ್‌ ರಾಜ್ಯತ್ವವನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು ಎಂದು ಅಧಿಕತ ಮೂಲಗಳು ತಿಳಿಸಿವೆ.

ನಿರ್ಣಯದ ಕರಡನ್ನು ಸಿದ್ಧಪಡಿಸಲಾಗಿದ್ದು, ಜಮ್ಮು ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ನಿರ್ಣಯದ ಕರಡನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಲು ಮುಖ್ಯಮಂತ್ರಿಗಳು ಒಂದೆರಡು ದಿನಗಳಲ್ಲಿ ನವದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಸುರೀಂದರ್‌ ಚೌಧರಿ ಮತ್ತು ಸಚಿವರಾದ ಸಕೀನಾ ಮಸೂದ್‌ ಇಟೂ, ಜಾವೇದ್‌ ಅಹದ್‌ ರಾಣಾ, ಜಾವೈದ್‌ ಅಹದ್‌ ದಾರ್‌ ಮತ್ತು ಸತೀಶ್‌ ಶರ್ಮಾ ಉಪಸ್ಥಿತರಿದ್ದರು. ಕಾಂಗ್ರೆಸ್‌‍ ಜೆಕೆಪಿಸಿಸಿ ಅಧ್ಯಕ್ಷ ತಾರಿಕ್‌ ಹಮೀದ್‌ ಕರಾರ್‌ ಅವರು ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸದ ಹೊರತು ಪಕ್ಷವು ಜೆ ಕೆ ಕ್ಯಾಬಿನೆಟ್‌ಗೆ ಸೇರುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು.

ಎನ್‌ಸಿ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರು ಕೇಂದ್ರವು ಶೀಘ್ರದಲ್ಲೇ ರಾಜ್ಯತ್ವವನ್ನು ಮರುಸ್ಥಾಪಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಮೊದಲು ರಾಜ್ಯತ್ವದ ಬಗ್ಗೆ ಮಾತನಾಡಿದ್ದೇವೆ ಮತ್ತು ಇಂದಿಗೂ ಸಹ, ಎರಡು ತಿಂಗಳೊಳಗೆ ರಾಜ್ಯತ್ವವನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ಭಾರತ ಸರ್ಕಾರವು ಅದನ್ನು ಶೀಘ್ರದಲ್ಲೇ ಮರುಸ್ಥಾಪಿಸುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಅಬ್ದುಲ್ಲಾ ಹೇಳಿದರು

RELATED ARTICLES

Latest News